<p><strong>ಅಜ್ಜಂಪುರ:</strong> ‘ಅಜ್ಜಂಪುರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.</p>.<p>ಬಾಳೆಹೊನ್ನೂರಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ರಮಿಸಿದವರಿಗೆ ಅಭಿನಂದನೆ ಮತ್ತು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಶನಿವಾರ ನಡೆಯಿತು.</p>.<p>ಈ ಸಂದರ್ಭ ಮಾತನಾಡಿದ ಅವರು, ‘ಮಾರ್ಚ್ 28 ಮತ್ತು 29ರಂದು ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸಮ್ಮೇಳನ ನಡೆಸಲಾಗುವುದು. ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ಕಾರ್ಯಕಾರಿ ಮಂಡಳಿಯಲ್ಲಿ ಅಂತಿಮಗೊಳಿಸಲಾಗುವುದು’ ಎಂದರು.</p>.<p>ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ‘ಸಮ್ಮೇಳನ ಯಶಸ್ಸಿಗೆ ಸ್ಥಳೀಯರು ಹೆಚ್ಚಿನ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಸಾಹಿತ್ಯ ಸಮ್ಮೇಳನ ಸಂದರ್ಭ ‘ಶಿವಕಲಾಮೃತ’ ಸ್ಮರಣ ಸಂಚಿಕೆ ಹೊರತರಲಾಗುವುದು. ಜಿಲ್ಲೆಯ ಲೇಖಕರು ತಕ್ಷಣ ಲೇಖನ ಕಳಿಸಬೇಕು ಎಂದು ಮನವಿ ಮಾಡಿದರು.</p>.<p>ಸಮ್ಮೇಳನಕ್ಕೆ ವಿವಿಧ ಸ್ವಾಗತ ಸಮಿತಿ ರಚಿಸಲಾಯಿತು. ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಶಿವಮೂರ್ತಿ, ಕಲಾವಿದ ಮಾಳೇನಹಳ್ಳಿ ಬಸಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಚ್. ರಾಜಣ್ಣ ಮಾತನಾಡಿದರು.</p>.<p>ಮುಖಂಡ ಎ.ಸಿ. ಚಂದ್ರಪ್ಪ, ಕನ್ನಡಶ್ರೀ ಭಗವಾನ್, ಇಮ್ರಾನ್, ಜಾನಪದ ಅಕಾಡೆಮಿ ಸದಸ್ಯೆ ಮುಗಳಿ ಲಕ್ಷಿ ದೇವಮ್ಮ, ಜಿಲ್ಲಾ ಕಸಾಪ ಪದಾಧಿಕಾರಿ ಎಸ್.ಎಸ್. ವೆಂಕಟೇಶ್, ಜಿ. ಬಿ. ಪವನ್, ಎಸ್. ಪರಮೇಶ್, ರವಿ ದಳವಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಜ್ಜಂಪುರ:</strong> ‘ಅಜ್ಜಂಪುರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು’ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸೂರಿ ಶ್ರೀನಿವಾಸ್ ತಿಳಿಸಿದರು.</p>.<p>ಬಾಳೆಹೊನ್ನೂರಿನಲ್ಲಿ ಈಚೆಗೆ ನಡೆದ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಶ್ರಮಿಸಿದವರಿಗೆ ಅಭಿನಂದನೆ ಮತ್ತು ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ ಪಟ್ಟಣದ ಕೈಲಾಸಂ ಕಲಾಕ್ಷೇತ್ರದಲ್ಲಿ ಶನಿವಾರ ನಡೆಯಿತು.</p>.<p>ಈ ಸಂದರ್ಭ ಮಾತನಾಡಿದ ಅವರು, ‘ಮಾರ್ಚ್ 28 ಮತ್ತು 29ರಂದು ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಸಮ್ಮೇಳನ ನಡೆಸಲಾಗುವುದು. ಸಮ್ಮೇಳನಾಧ್ಯಕ್ಷರ ಆಯ್ಕೆಯನ್ನು ಕಾರ್ಯಕಾರಿ ಮಂಡಳಿಯಲ್ಲಿ ಅಂತಿಮಗೊಳಿಸಲಾಗುವುದು’ ಎಂದರು.</p>.<p>ಸಾಹಿತಿ ಚಟ್ನಳ್ಳಿ ಮಹೇಶ್ ಮಾತನಾಡಿ, ‘ಸಮ್ಮೇಳನ ಯಶಸ್ಸಿಗೆ ಸ್ಥಳೀಯರು ಹೆಚ್ಚಿನ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ಸಾಹಿತ್ಯ ಸಮ್ಮೇಳನ ಸಂದರ್ಭ ‘ಶಿವಕಲಾಮೃತ’ ಸ್ಮರಣ ಸಂಚಿಕೆ ಹೊರತರಲಾಗುವುದು. ಜಿಲ್ಲೆಯ ಲೇಖಕರು ತಕ್ಷಣ ಲೇಖನ ಕಳಿಸಬೇಕು ಎಂದು ಮನವಿ ಮಾಡಿದರು.</p>.<p>ಸಮ್ಮೇಳನಕ್ಕೆ ವಿವಿಧ ಸ್ವಾಗತ ಸಮಿತಿ ರಚಿಸಲಾಯಿತು. ಹಿರಿಯ ನಾಗರಿಕ ವೇದಿಕೆ ಅಧ್ಯಕ್ಷ ಶಿವಮೂರ್ತಿ, ಕಲಾವಿದ ಮಾಳೇನಹಳ್ಳಿ ಬಸಪ್ಪ, ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಚ್. ರಾಜಣ್ಣ ಮಾತನಾಡಿದರು.</p>.<p>ಮುಖಂಡ ಎ.ಸಿ. ಚಂದ್ರಪ್ಪ, ಕನ್ನಡಶ್ರೀ ಭಗವಾನ್, ಇಮ್ರಾನ್, ಜಾನಪದ ಅಕಾಡೆಮಿ ಸದಸ್ಯೆ ಮುಗಳಿ ಲಕ್ಷಿ ದೇವಮ್ಮ, ಜಿಲ್ಲಾ ಕಸಾಪ ಪದಾಧಿಕಾರಿ ಎಸ್.ಎಸ್. ವೆಂಕಟೇಶ್, ಜಿ. ಬಿ. ಪವನ್, ಎಸ್. ಪರಮೇಶ್, ರವಿ ದಳವಾಯಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>