‘ಪಟ್ಟಣ ಪಂಚಾಯಿತಿ ಅಧಿಕಾರಿಗಳು, ಯಾವುದೋ ಮುಲಾಜಿಗೆ ಒಳಗಾಗಿ ಪರಿಶಿಷ್ಟ ಜಾತಿ, ಪಂಗಡ, ಅಂಗವಿಕಲರಿಗೆ ಸಮಾನ ಅವಕಾಶ ಕಲ್ಪಿಸದೇ ತಾರತಮ್ಯ ಮಾಡಿದ್ದಾರೆ. ಕೂಡಲೇ ಮಧ್ಯೆ ಪ್ರವೇಶಿಸಿ, ಪಟ್ಟಿಯನ್ನು ಪರಿಶೀಲಿಸಬೇಕು. ಆಗಿರುವ ತಾರತಮ್ಯ ನಿವಾರಿಸಲು ಅನ್ಯ ಕ್ರಮಾಂಕದ ಮಳಿಗೆಯನ್ನು ಮೀಸಲಿರಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಎಸ್.ಎನ್. ಮಹೇಂದ್ರಸ್ವಾಮಿ ಹಾಗೂ ಮುಖಂಡ ಹೆಬ್ಬೂರು ಶಿವಣ್ಣ ತಹಶೀಲ್ದಾರ್ ವಿಶ್ವೇಶ್ವರ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು.