<p>ಅಜ್ಜಂಪುರ: ‘ಸ್ವಾತಂತ್ರ್ಯಾ ನಂತರದ ಭಾರತಕ್ಕೆ ಸಂವಿಧಾನದ ಮೂಲಕ ಭದ್ರ ಬುನಾದಿ ಹಾಕಿದ ಶ್ರೇಯಸ್ಸು ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ನಡೆದ ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಮಾಳೇನಹಳ್ಳಿ ಗ್ರಾಮಕ್ಕೆ ಶ್ರಮಿಕರ ಶಾಲೆ ಹಾಗೂ ಪಟ್ಟಣದ ಶೆಟ್ರು ಸಿದ್ದಪ್ಪ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ವಿಭಾಗಕ್ಕೆ ಕೆಪಿಎಸ್ ಶಾಲೆ ಮಂಜೂರಾಗಿದೆ ಎಂದು ತಿಳಿಸಿದರು.</p>.<p>ವಕೀಲ ಜಯಪ್ರಕಾಶ್ ನಾರಾಯಣ್ ಅಂಬೇಡ್ಕರ್ ಬಗ್ಗೆ ಮಾತನಾಡಿದರು.</p>.<p>ತಹಶೀಲ್ದಾರ್ ವಿನಾಯಕ ಸಾಗರ್ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.</p>.<p>ದಲಿತ ಮುಖಂಡ ಮಹೇಂದ್ರ ಸ್ವಾಮಿ, ಅಂಬೇಡ್ಕರ್ ಭವನಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಇಬ್ಬರು ನಾಯಕರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.</p>.<p>ಮುಖಂಡರಾದ ಜಿ. ನಟರಾಜ್, ಮಹೇಂದ್ರಾಚಾರ್, ಶಾಂತ ಕುಮಾರ್, ತಿಪ್ಪೇಶ್ ಮಡಿವಾಳ್, ಗುರುಮೂರ್ತಿ, ಗಂಗಾಧರಪ್ಪ, ಸರ್ಕಾರಿ ನೌಕರ ಸಂಘ ತಾಲ್ಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಲಿಂಗಮೂರ್ತಿ, ಯೋಗೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-15329137</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಜ್ಜಂಪುರ: ‘ಸ್ವಾತಂತ್ರ್ಯಾ ನಂತರದ ಭಾರತಕ್ಕೆ ಸಂವಿಧಾನದ ಮೂಲಕ ಭದ್ರ ಬುನಾದಿ ಹಾಕಿದ ಶ್ರೇಯಸ್ಸು ಬಿ.ಆರ್.ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ’ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಹೇಳಿದರು.</p>.<p>ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪಟ್ಟಣ ಪಂಚಾಯಿತಿ ವತಿಯಿಂದ ಮಂಗಳವಾರ ನಡೆದ ಅಂಬೇಡ್ಕರ್ ಹಾಗೂ ಜಗಜೀವನ್ ರಾಂ ಜಯಂತ್ಯುತ್ಸವದಲ್ಲಿ ಅವರು ಮಾತನಾಡಿದರು.</p>.<p>ಮಾಳೇನಹಳ್ಳಿ ಗ್ರಾಮಕ್ಕೆ ಶ್ರಮಿಕರ ಶಾಲೆ ಹಾಗೂ ಪಟ್ಟಣದ ಶೆಟ್ರು ಸಿದ್ದಪ್ಪ ಪದವಿ ಪೂರ್ವ ಕಾಲೇಜು ಹೈಸ್ಕೂಲ್ ವಿಭಾಗಕ್ಕೆ ಕೆಪಿಎಸ್ ಶಾಲೆ ಮಂಜೂರಾಗಿದೆ ಎಂದು ತಿಳಿಸಿದರು.</p>.<p>ವಕೀಲ ಜಯಪ್ರಕಾಶ್ ನಾರಾಯಣ್ ಅಂಬೇಡ್ಕರ್ ಬಗ್ಗೆ ಮಾತನಾಡಿದರು.</p>.<p>ತಹಶೀಲ್ದಾರ್ ವಿನಾಯಕ ಸಾಗರ್ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.</p>.<p>ದಲಿತ ಮುಖಂಡ ಮಹೇಂದ್ರ ಸ್ವಾಮಿ, ಅಂಬೇಡ್ಕರ್ ಭವನಕ್ಕೆ ಮೂಲ ಸೌಕರ್ಯ ಕಲ್ಪಿಸಬೇಕು ಎಂದು ಶಾಸಕರನ್ನು ಒತ್ತಾಯಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ವಿಜಯ್ ಕುಮಾರ್ ಸಂವಿಧಾನ ಪೀಠಿಕೆ ಬೋಧಿಸಿದರು. ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.</p>.<p>ಇದಕ್ಕೂ ಮುನ್ನ ಪ್ರಮುಖ ರಸ್ತೆಗಳಲ್ಲಿ ಇಬ್ಬರು ನಾಯಕರ ಭಾವಚಿತ್ರ ಮೆರವಣಿಗೆ ನಡೆಸಲಾಯಿತು.</p>.<p>ಮುಖಂಡರಾದ ಜಿ. ನಟರಾಜ್, ಮಹೇಂದ್ರಾಚಾರ್, ಶಾಂತ ಕುಮಾರ್, ತಿಪ್ಪೇಶ್ ಮಡಿವಾಳ್, ಗುರುಮೂರ್ತಿ, ಗಂಗಾಧರಪ್ಪ, ಸರ್ಕಾರಿ ನೌಕರ ಸಂಘ ತಾಲ್ಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಲಿಂಗಮೂರ್ತಿ, ಯೋಗೀಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-126-15329137</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>