ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಲ್ದೂರು: ಪೊಲೀಸರಿಗೆ ಜನರ ಸಹಕಾರ ಅಗತ್ಯ:ಎಸ್ಪಿ

ನವೀಕರಿಸಿದ ಪೊಲೀಸ್ ಠಾಣೆ ಉದ್ಘಾಟನೆ
Last Updated 1 ಫೆಬ್ರುವರಿ 2023, 6:01 IST
ಅಕ್ಷರ ಗಾತ್ರ

ಆಲ್ದೂರು: ಆಲ್ದೂರು ಸರ್ಕಲ್ ವ್ಯಾಪ್ತಿಯ ಮಲ್ಲಂದೂರು ಪೊಲೀಸ್ ಠಾಣೆಯ ನವೀಕೃತ ಕಟ್ಟಡವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಉದ್ಘಾಟಿಸಿದರು.

ಪೊಲೀಸ್ ಠಾಣೆ ಎಂದರೆ ಜನರಲ್ಲಿ ಸಮಸ್ಯೆ ಆದಾಗ ಮತ್ತು ಅಪರಾಧಿಗಳು ಹೆಚ್ಚಾಗಿ ಭೇಟಿ ಕೊಡುವ ಸ್ಥಳವೆನ್ನುವ ಮನೋಭಾವ ಇದೆ. ಸಾರ್ವಜನಿಕರು ನಿರ್ಭೀತಿಯಿಂದ ಠಾಣೆಗೆ ಭೇಟಿ ಕೊಡುತ್ತೇವೆ ಎಂದು ತಿಳಿಸಿದ್ದು, ಹೊಸತನಕ್ಕೆ ಮುನ್ನುಡಿ ಬರೆದಂತಾಗಿದೆ. ಪೊಲೀಸ್ ಠಾಣೆಗಳು ಮಾದರಿಯಾಗಲು ನೆರೆಹೊರೆಯವರ ಸಹಕಾರ ಅಗತ್ಯ. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಜತೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಅವರು ಹೇಳಿದರು.

ಒಕ್ಕಲಿಗ ಸಂಘದ ಜಿಲ್ಲಾ ಕಾರ್ಯದರ್ಶಿ ಮಾಡ್ಲಾ ಪ್ರಕಾಶ್ ಮಾತನಾಡಿ, ಠಾಣೆಯಲ್ಲಿ ಭಾರ
ತೀಯ ದಂಡ ಸಂಹಿತೆ ಪುಸ್ತಕ, ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಪುಸ್ತಕಗಳು, ಕಾನೂನು ಅರಿವು ಸಂಬಂಧ ಪುಸ್ತಕಗಳನ್ನು ಇಡುವ ನೂತನ ಗ್ರಂಥಾಲಯ ಯೋಜನೆ ರೂಪಿಸಿರುವುದನ್ನು ಶ್ಲಾಘಿಸಿದರು.

ಗ್ರಾಮದ ಮುಖಂಡ ಪುಟ್ಟೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಚಿಕ್ಕಮಗಳೂರು ಉಪ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಪುರುಷೋತ್ತಮ್, ಆಲ್ದೂರು ವೃತ್ತ ನಿರೀಕ್ಷಕ ಸತ್ಯನಾರಾಯಣ, ಉಪನಿರೀಕ್ಷಕ ಸಜಿತ್ ಕುಮಾರ್ ಜಿ.ಆರ್, ಠಾಣೆಯ ಉಪನಿರೀಕ್ಷಕ ರವೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT