ಸಮೀಪದ ಕಸ್ಕೆಮನೆ ಅರಣ್ಯ ಪ್ರದೇಶದಿಂದ ಆನೆ ಆಗಾಗ ಬಂದು ಬೆಳೆ ಹಾನಿ ಮಾಡುತ್ತಿದೆ. ತೋಟದಲ್ಲಿ ಕಾರ್ಮಿಕರನ್ನು ಇಟ್ಟು ಕೆಲಸ ಮಾಡಿಸುವುದು, ಒಬ್ಬಂಟಿಯಾಗಿ ತಿರುಗಾಡುವುದು ಕಷ್ಟ ಸಾಧ್ಯವಾಗಿದ್ದು, ಭಯದ ವಾತಾವರಣದಲ್ಲಿಯೇ ಬದುಕಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಅರಣ್ಯ ಇಲಾಖೆ ಅಧಿಕಾರಿಗಳು ನೆರವಾಗಬೇಕೆಂದು ಸೋಮಶೇಖರ್ ಮನವಿ ಮಾಡಿದ್ದಾರೆ.