<p>ಆಲ್ದೂರು: ವನ್ಯಜೀವಿಗಳಿಂದ ಆಗಿರುವ ಬೆಳೆಹಾನಿ ಬಗ್ಗೆ ಮಹಜರು ಮಾಡುವಾಗ ಉಪ ವಲಯ ಅರಣ್ಯಾಧಿಕಾರಿ (ಡಿಆರ್ಎಫ್ಒ) ವೀರಭದ್ರ ನಾಯಕ್ ಅವರು ರೈತರಿಂದ ಹಣ ಕೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆದೇಶಿಸಿದ್ದಾರೆ.</p>.<p>ಹಾಳಾಗಿರುವ ಅಡಕೆ ಗಿಡಗಳ ಲೆಕ್ಕ ಬರೆದುಕೊಳ್ಳುವಾಗ ‘ಹಾಳಾಗಿರುವ 65 ಗಿಡಗಳ ಲೆಕ್ಕಾ ಸಿಕ್ಕಿದೆ. ಈಗಲೇ ಖರ್ಚಿಗೆ ಏನಾದರೂ ಕೊಡುವುದಾದರೆ ಬೇರೆ ಬರೆಯುತ್ತೇನೆ. ಇಲ್ಲದಿದ್ದರೆ ಇಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.</p>.<p>ಈ ಬಗ್ಗೆ ತನಿಖೆಗೆ ಆದೇಶಿಸಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ‘ಗ್ರಾಮಸ್ಥರು ನೀಡಿರುವ ದೂರುಗಳಲ್ಲಿ ಇರುವ ಅಂಶಗಳನ್ನೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-126-2071689388</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲ್ದೂರು: ವನ್ಯಜೀವಿಗಳಿಂದ ಆಗಿರುವ ಬೆಳೆಹಾನಿ ಬಗ್ಗೆ ಮಹಜರು ಮಾಡುವಾಗ ಉಪ ವಲಯ ಅರಣ್ಯಾಧಿಕಾರಿ (ಡಿಆರ್ಎಫ್ಒ) ವೀರಭದ್ರ ನಾಯಕ್ ಅವರು ರೈತರಿಂದ ಹಣ ಕೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಆದೇಶಿಸಿದ್ದಾರೆ.</p>.<p>ಹಾಳಾಗಿರುವ ಅಡಕೆ ಗಿಡಗಳ ಲೆಕ್ಕ ಬರೆದುಕೊಳ್ಳುವಾಗ ‘ಹಾಳಾಗಿರುವ 65 ಗಿಡಗಳ ಲೆಕ್ಕಾ ಸಿಕ್ಕಿದೆ. ಈಗಲೇ ಖರ್ಚಿಗೆ ಏನಾದರೂ ಕೊಡುವುದಾದರೆ ಬೇರೆ ಬರೆಯುತ್ತೇನೆ. ಇಲ್ಲದಿದ್ದರೆ ಇಲ್ಲ’ ಎಂದು ಹೇಳಿರುವುದು ವಿಡಿಯೊದಲ್ಲಿದೆ.</p>.<p>ಈ ಬಗ್ಗೆ ತನಿಖೆಗೆ ಆದೇಶಿಸಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು, ‘ಗ್ರಾಮಸ್ಥರು ನೀಡಿರುವ ದೂರುಗಳಲ್ಲಿ ಇರುವ ಅಂಶಗಳನ್ನೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಆದೇಶ ನೀಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260402-126-2071689388</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>