ಕಾಫಿ ಮಂಡಳಿ ಕಾರ್ಯದರ್ಶಿ ಡಾ.ಕೆ ಜಿ ಜಗದೀಶ್ ಮಾತನಾಡಿ, ‘ಕಾಫಿ ಬೆಳೆ ನಷ್ಟದ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ಮಳೆ ನಿಂತ ಕೂಡಲೇ ಸರಿಯಾದ ಸಮಯಕ್ಕೆ ಕಾಫಿ ಮಂಡಳಿ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಬೆಳೆ ನಷ್ಟದ ಸಮೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಮೋಹನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದೇವೆ’ ಎಂದು ತಿಳಿಸಿದರು.