ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಹಿರಿಯ ಪ್ರಾಥಮಿಕ ಪಾಠಶಾಲೆ, ಸರ್ಕಾರಿ ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಪಶು ಆಸ್ಪತ್ರೆಗೆ ಇದೇ ರಸ್ತೆಯ ಮೂಲಕ ಸಂಚರಿಸಬೇಕಿದ್ದು, ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ಈ ರಸ್ತೆಯಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿದೆ. ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಭಾನುವಾರ ನಡೆಯುವ ವಾರದ ಸಂತೆ ಬರಲು ಜನರು ತೊಂದರೆ ಅನುಭವಿಸುತ್ತಿದ್ದಾರೆ.