ಆಲ್ದೂರು: ಪಟ್ಟಣದ ಮೂಲಕ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಅಂಬೇಡ್ಕರ್ ವೃತ್ತದ ತಿರುವಿನಲ್ಲಿ ಟಿಂಬರ್ ಲಾರಿಯು ಚಿಕ್ಕಮಗಳೂರು ಮಾರ್ಗವಾಗಿ ಚಲಿಸುತ್ತಿರುವಾಗಲೇ ಗೂಟ ಮುರಿದು ಹಗ್ಗ ಸಡಿಲಗೊಂಡ ಕಾರಣ 5ಸಿಲ್ವರ್ ಮರದ ದಿಮ್ಮಿಗಳು ಹೆದ್ದಾರಿ ಮೇಲೆ ಉರುಳಿ ಬಿದ್ದಿದ್ದು, ದ್ವಿಚಕ್ರ ವಾಹನ ಸವಾರರು ಸ್ವಲ್ಪದರಲ್ಲಿಯೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.