<p><strong>ಮೂಡಿಗೆರೆ</strong>: ತಾಲ್ಲೂಕಿನ ಅಲೆಕಾನು ಗ್ರಾಮದಲ್ಲಿ ದನಗಳನ್ನು ಮೇಯಿಸಲು ಹೋಗಿದ್ದ ರೈತನೊಬ್ಬನ ಮೇಲೆ ಕಾಡು ಹಂದಿಯ ದಾಳಿ ನಡೆಸಿದೆ. ರೈತನ ಕೈ ಬೆರಳುನ್ನು ಕಚ್ಚಿ ತುಂಡು ಮಾಡಿದೆ.</p>.<p>ಅಲೆಕಾನು ನಿವಾಸಿ ಉಪೇಂದ್ರ ಗಾಯಗೊಂಡ ವ್ಯಕ್ತಿ. ದನಗಳನ್ನು ಮೇಯಿಸಿಮರಳುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದ ಹಂದಿಯು, ಕೈ ಬೆರಳನ್ನು ಕಚ್ಚಿತು. ಒಂದು ಬೆರಳು ಸಂಪೂರ್ಣ ತುಂಡಾಗಿದೆ. ತಕ್ಷಣ ಸ್ಥಳೀಯರ ನೆರವಿನಿಂದ ಉಪೇಂದ್ರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p><br> ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೂ ಯಾವುದೇ ಅಧಿಕಾರಿ ಸ್ಥಳಕ್ಕೆ ಬಂದಿಲ್ಲ. ಗಾಯಗೊಂಡು ಆಸ್ಪತ್ರೆಗೆ ದಾಖಲಾದರೂ ಸೌಜನ್ಯಕ್ಕಾಗಿಯೂ ಅಧಿಕಾರಿಗಳು ಅವರನ್ನು ಭೇಟಿ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p><p><br> ಅರಣ್ಯ ಇಲಾಖೆಯು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ತಾಲ್ಲೂಕಿನ ಅಲೆಕಾನು ಗ್ರಾಮದಲ್ಲಿ ದನಗಳನ್ನು ಮೇಯಿಸಲು ಹೋಗಿದ್ದ ರೈತನೊಬ್ಬನ ಮೇಲೆ ಕಾಡು ಹಂದಿಯ ದಾಳಿ ನಡೆಸಿದೆ. ರೈತನ ಕೈ ಬೆರಳುನ್ನು ಕಚ್ಚಿ ತುಂಡು ಮಾಡಿದೆ.</p>.<p>ಅಲೆಕಾನು ನಿವಾಸಿ ಉಪೇಂದ್ರ ಗಾಯಗೊಂಡ ವ್ಯಕ್ತಿ. ದನಗಳನ್ನು ಮೇಯಿಸಿಮರಳುತ್ತಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ್ದ ಹಂದಿಯು, ಕೈ ಬೆರಳನ್ನು ಕಚ್ಚಿತು. ಒಂದು ಬೆರಳು ಸಂಪೂರ್ಣ ತುಂಡಾಗಿದೆ. ತಕ್ಷಣ ಸ್ಥಳೀಯರ ನೆರವಿನಿಂದ ಉಪೇಂದ್ರ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಗ್ರಾಮಸ್ಥರು ತಿಳಿಸಿದ್ದಾರೆ.</p><p><br> ಘಟನೆಯ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದೆ. ಆದರೂ ಯಾವುದೇ ಅಧಿಕಾರಿ ಸ್ಥಳಕ್ಕೆ ಬಂದಿಲ್ಲ. ಗಾಯಗೊಂಡು ಆಸ್ಪತ್ರೆಗೆ ದಾಖಲಾದರೂ ಸೌಜನ್ಯಕ್ಕಾಗಿಯೂ ಅಧಿಕಾರಿಗಳು ಅವರನ್ನು ಭೇಟಿ ಮಾಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.</p><p><br> ಅರಣ್ಯ ಇಲಾಖೆಯು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>