<p><strong>ಚಿಕ್ಕಮಗಳೂರು:</strong> ಕಳಸ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲು ಬಂದಿದ್ದ ವೈದ್ಯ ಬಾಲಕೃಷ್ಣ, ಮದ್ಯ ಕುಡಿದಿದ್ದರು ಎಂಬ ಆರೋಪ ಸತ್ಯವೇ, ಸುಳ್ಳೇ ಎಂಬುದನ್ನು ದೃಢೀಕರಿಸಲು ಅಗತ್ಯವಾಗಿ ಬೇಕಿದ್ದ ವೈದ್ಯಕೀಯ ಪರೀಕ್ಷೆಯೇ ನಡೆದಿಲ್ಲ!</p>.<p>ಸ್ಥಳೀಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಹೇಳಿಕೆ ಆಧರಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್. ಉಮೇಶ್ ಅವರು ವರದಿ ಸಿದ್ಧಪಡಿಸಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರಿಗೆ ಸಲ್ಲಿಸಿದ್ದಾರೆ.</p>.<p>‘ಬಾಲಕೃಷ್ಣ ಅವರಿಗೆ ಎದೆನೋವು ಇದ್ದುದರಿಂದ ಆ ಸಂದರ್ಭದಲ್ಲಿ ತರಾತುರಿ ಇತ್ತು. ಇಸಿಜಿ ಅಷ್ಟೇ ಮಾಡಲಾಗಿದ್ದು, ರಕ್ತ ಪರೀಕ್ಷೆ ಮಾಡಿಲ್ಲ. ಆದ್ದರಿಂದ ರಕ್ತದಲ್ಲಿ ಆಲ್ಕೊಹಾಲ್ ಆಂಶ ಇತ್ತೇ ಇಲ್ಲವೇ ಎಂಬುದನ್ನು ಖಚಿತವಾಗಿ ಹೇಳಲು ಆಗುತ್ತಿಲ್ಲ’ ಎಂದು ಡಿಎಚ್ಒ ಉಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸ್ಥಳೀಯರು ಮತ್ತು ಆಸ್ಪತ್ರೆಯ ಕೆಲ ಸಿಬ್ಬಂದಿಯ ಹೇಳಿಕೆ ಗಮನಿಸಿದಾಗ, ವೈದ್ಯರು ಮದ್ಯ ಕುಡಿದಿರಬಹುದು ಎಂಬ ಅನುಮಾನ ಮೂಡಿದೆ. ಪ್ರಕರಣ ಕುರಿತ ನನ್ನ ಅಭಿಪ್ರಾಯವನ್ನು ವರದಿಯಲ್ಲಿ ತಿಳಿಸಿದ್ದೇನೆ’ ಎಂದರು.</p>.<p>‘ಬಾಲಕೃಷ್ಣ ಅವರು ಈವರೆಗೆ ಕರ್ತವ್ಯದಿಂದ ಅಮಾನತುಗೊಂಡಿಲ್ಲ. ವರದಿ ಆಧರಿಸಿ ಅಮಾನತು ಮಾಡುವುದು ಅಥವಾ ಬಿಡುವುದು ಮೇಲಧಿಕಾರಿಗಳಿಗೆ ಬಿಟ್ಟ ವಿಚಾರ’ ಎಂದು ಸ್ಪಷ್ಟಪಡಿಸಿದರು.</p>.<p>ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆಂದು ಬುಧವಾರ ಹಲವು ಮಹಿಳೆಯರು ಬಂದಿದ್ದರು. ಶೃಂಗೇರಿಯಿಂದ ಬಂದಿದ್ದ ವೈದ್ಯ ಬಾಲಕೃಷ್ಣ ಅವರು ಶಸ್ತ್ರಚಿಕಿತ್ಸೆ ಮಾಡಲು ಅಸಮರ್ಥರಾಗಿದ್ದರಿಂದ ಶಸ್ತ್ರಚಿಕಿತ್ಸೆ ರದ್ದಾಗಿತ್ತು. ವೈದ್ಯ ಪಾನಮತ್ತರಾಗಿದ್ದರು ಎಂದು ಸ್ಥಳೀಯರು ಮತ್ತು ರೋಗಿಗಳ ಸಂಬಂಧಿಕರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಕಳಸ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಲು ಬಂದಿದ್ದ ವೈದ್ಯ ಬಾಲಕೃಷ್ಣ, ಮದ್ಯ ಕುಡಿದಿದ್ದರು ಎಂಬ ಆರೋಪ ಸತ್ಯವೇ, ಸುಳ್ಳೇ ಎಂಬುದನ್ನು ದೃಢೀಕರಿಸಲು ಅಗತ್ಯವಾಗಿ ಬೇಕಿದ್ದ ವೈದ್ಯಕೀಯ ಪರೀಕ್ಷೆಯೇ ನಡೆದಿಲ್ಲ!</p>.<p>ಸ್ಥಳೀಯರು ಮತ್ತು ಆಸ್ಪತ್ರೆ ಸಿಬ್ಬಂದಿಯ ಹೇಳಿಕೆ ಆಧರಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎನ್. ಉಮೇಶ್ ಅವರು ವರದಿ ಸಿದ್ಧಪಡಿಸಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಅವರಿಗೆ ಸಲ್ಲಿಸಿದ್ದಾರೆ.</p>.<p>‘ಬಾಲಕೃಷ್ಣ ಅವರಿಗೆ ಎದೆನೋವು ಇದ್ದುದರಿಂದ ಆ ಸಂದರ್ಭದಲ್ಲಿ ತರಾತುರಿ ಇತ್ತು. ಇಸಿಜಿ ಅಷ್ಟೇ ಮಾಡಲಾಗಿದ್ದು, ರಕ್ತ ಪರೀಕ್ಷೆ ಮಾಡಿಲ್ಲ. ಆದ್ದರಿಂದ ರಕ್ತದಲ್ಲಿ ಆಲ್ಕೊಹಾಲ್ ಆಂಶ ಇತ್ತೇ ಇಲ್ಲವೇ ಎಂಬುದನ್ನು ಖಚಿತವಾಗಿ ಹೇಳಲು ಆಗುತ್ತಿಲ್ಲ’ ಎಂದು ಡಿಎಚ್ಒ ಉಮೇಶ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಸ್ಥಳೀಯರು ಮತ್ತು ಆಸ್ಪತ್ರೆಯ ಕೆಲ ಸಿಬ್ಬಂದಿಯ ಹೇಳಿಕೆ ಗಮನಿಸಿದಾಗ, ವೈದ್ಯರು ಮದ್ಯ ಕುಡಿದಿರಬಹುದು ಎಂಬ ಅನುಮಾನ ಮೂಡಿದೆ. ಪ್ರಕರಣ ಕುರಿತ ನನ್ನ ಅಭಿಪ್ರಾಯವನ್ನು ವರದಿಯಲ್ಲಿ ತಿಳಿಸಿದ್ದೇನೆ’ ಎಂದರು.</p>.<p>‘ಬಾಲಕೃಷ್ಣ ಅವರು ಈವರೆಗೆ ಕರ್ತವ್ಯದಿಂದ ಅಮಾನತುಗೊಂಡಿಲ್ಲ. ವರದಿ ಆಧರಿಸಿ ಅಮಾನತು ಮಾಡುವುದು ಅಥವಾ ಬಿಡುವುದು ಮೇಲಧಿಕಾರಿಗಳಿಗೆ ಬಿಟ್ಟ ವಿಚಾರ’ ಎಂದು ಸ್ಪಷ್ಟಪಡಿಸಿದರು.</p>.<p>ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆಗೆಂದು ಬುಧವಾರ ಹಲವು ಮಹಿಳೆಯರು ಬಂದಿದ್ದರು. ಶೃಂಗೇರಿಯಿಂದ ಬಂದಿದ್ದ ವೈದ್ಯ ಬಾಲಕೃಷ್ಣ ಅವರು ಶಸ್ತ್ರಚಿಕಿತ್ಸೆ ಮಾಡಲು ಅಸಮರ್ಥರಾಗಿದ್ದರಿಂದ ಶಸ್ತ್ರಚಿಕಿತ್ಸೆ ರದ್ದಾಗಿತ್ತು. ವೈದ್ಯ ಪಾನಮತ್ತರಾಗಿದ್ದರು ಎಂದು ಸ್ಥಳೀಯರು ಮತ್ತು ರೋಗಿಗಳ ಸಂಬಂಧಿಕರು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>