<p><strong>ಚಿಕ್ಕಮಗಳೂರು: </strong>‘ಜಿಲ್ಲೆಯ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿಯಲ್ಲಿ ಭದ್ರಾ ಪುನರ್ವಸತಿಗಾಗಿ ಮೀಸಲಿಟ್ಟಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಮುಂದುವರಿದಿದೆ, ತೆರವುಗೊಳಿಸಲು ಕ್ರಮವಹಿಸಬೇಕು’ ಜಿಲ್ಲಾಧಿಕಾರಿಗೆ ಎಂದು ಭದ್ರಾ ಪುನರ್ವಸತಿ ಸಂತ್ರಸ್ತ ಕೆ.ಜಿ.ಕೇಶವ ದೂರು ನೀಡಿದ್ದಾರೆ.</p>.<p>‘ಗ್ರಾಮದ ಸರ್ವೆ ನಂ 442ರ 22.14 ಎಕರೆ ಜಾಗವನ್ನು ಭದ್ರಾ ಪುನರ್ವಸತಿಗೆ (ಸಾರ್ವಜನಿಕ ಉದ್ದೇಶಕ್ಕೆ) ಕಾಯ್ದಿರಿಸಲಾಗಿದೆ. ಗ್ರಾಮದವರೊಬ್ಬರು ಈ ಜಾಗದ 30X30 ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಕಟ್ಟಡ ನಿರ್ಮಿಸುತ್ತಿರುವವ ವಿರುದ್ಧ ತಹಶೀಲ್ದಾರ್ ದೂರು ದಾಖಲಿಸುವಂತೆ ತರೀಕೆರೆ ತಹಶೀಲ್ದಾರ್ ಅವರು ತರೀಕೆರೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಫೆ.6ರಂದು ಪತ್ರ ಬರೆದಿದ್ದಾರೆ. ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ತರೀಕೆರೆ ಉಪವಿಭಾಗಾಧಿಕಾರಿ ಗಮನ ಸೆಳದರೂ ಪ್ರಯೋಜವಾಗಿಲ್ಲ. ಕಟ್ಟಡ ಕಾಮಗಾರಿ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<p>‘ಕಟ್ಟಡ ನಿರ್ಮಿಸುತ್ತಿರುವವರು ಪ್ರಭಾವಿಗಳು. ಗ್ರಾಮ ಪಂಚಾಯಿತಿಯ ಕೆಲ ಅಧಿಕಾರಿಗಳು, ಸದಸ್ಯರು ಅವರ ಜತೆ ಶಾಮೀಲಾಗಿರುವ ಗುಮಾನಿ ಇದೆ. ಪ್ರಭಾವ ಬಳಸಿ ನಮ್ಮ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ದೂರಿದ್ದಾರೆ.</p>.<p>ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಬೇಕು. ನಿರ್ಮಾಣ ಹಂತದಲ್ಲಿರುವ ಅಕ್ರಮ ಕಟ್ಟಡ ತೆರವುಗೊಳಿಸಲು ಕ್ರಮ ವಹಿಸಬೇಕು. ಅಕ್ರಮದಲ್ಲಿ ಶಾಮೀಲಾಗಿರುವವರ ವಿರುದ್ಧವೂ ಕ್ರಮ ಜರುಗಿಸಬೇಕು. ಸರ್ಕಾರಿ ಜಾಗವನ್ನು ರಕ್ಷಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಸ್ಥಳ ಪರಿಶೀಲಿಸಿ ಕ್ರಮ: ತಹಶೀಲ್ದಾರ್</strong><br />‘ಕಟ್ಟಡ ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ತರೀಕೆರೆ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಆವರು ಎಫ್ಐಆರ್ ಮಾಡಿಲ್ಲ’ ಎಂದು ತಹಶೀಲ್ದಾರ್ ಗೀತಾ ತಿಳಿಸಿದರು.</p>.<p>‘ಗುರುವಾರ ಸ್ಥಳ ಪರಿಶೀಲನೆ ಮಾಡುತ್ತೇವೆ. ಭೂಕಬಳಿಕೆ ದೂರು ದಾಖಲಿಸಲು ಗಮನ ಹರಿಸುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ಜಿಲ್ಲೆಯ ತರೀಕೆರೆ ತಾಲ್ಲೂಕಿನ ಎಂ.ಸಿ. ಹಳ್ಳಿಯಲ್ಲಿ ಭದ್ರಾ ಪುನರ್ವಸತಿಗಾಗಿ ಮೀಸಲಿಟ್ಟಿರುವ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಾಣ ಕಾಮಗಾರಿ ಮುಂದುವರಿದಿದೆ, ತೆರವುಗೊಳಿಸಲು ಕ್ರಮವಹಿಸಬೇಕು’ ಜಿಲ್ಲಾಧಿಕಾರಿಗೆ ಎಂದು ಭದ್ರಾ ಪುನರ್ವಸತಿ ಸಂತ್ರಸ್ತ ಕೆ.ಜಿ.ಕೇಶವ ದೂರು ನೀಡಿದ್ದಾರೆ.</p>.<p>‘ಗ್ರಾಮದ ಸರ್ವೆ ನಂ 442ರ 22.14 ಎಕರೆ ಜಾಗವನ್ನು ಭದ್ರಾ ಪುನರ್ವಸತಿಗೆ (ಸಾರ್ವಜನಿಕ ಉದ್ದೇಶಕ್ಕೆ) ಕಾಯ್ದಿರಿಸಲಾಗಿದೆ. ಗ್ರಾಮದವರೊಬ್ಬರು ಈ ಜಾಗದ 30X30 ವಿಸ್ತೀರ್ಣದಲ್ಲಿ ಕಟ್ಟಡ ನಿರ್ಮಾಣ ಕೈಗೆತ್ತಿಕೊಂಡಿದ್ದಾರೆ. ಕಟ್ಟಡ ನಿರ್ಮಿಸುತ್ತಿರುವವ ವಿರುದ್ಧ ತಹಶೀಲ್ದಾರ್ ದೂರು ದಾಖಲಿಸುವಂತೆ ತರೀಕೆರೆ ತಹಶೀಲ್ದಾರ್ ಅವರು ತರೀಕೆರೆ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಫೆ.6ರಂದು ಪತ್ರ ಬರೆದಿದ್ದಾರೆ. ಪೊಲೀಸರು ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.</p>.<p>ಈ ಬಗ್ಗೆ ತರೀಕೆರೆ ಉಪವಿಭಾಗಾಧಿಕಾರಿ ಗಮನ ಸೆಳದರೂ ಪ್ರಯೋಜವಾಗಿಲ್ಲ. ಕಟ್ಟಡ ಕಾಮಗಾರಿ ಮುಂದುವರಿದಿದೆ’ ಎಂದು ತಿಳಿಸಿದ್ದಾರೆ.</p>.<p>‘ಕಟ್ಟಡ ನಿರ್ಮಿಸುತ್ತಿರುವವರು ಪ್ರಭಾವಿಗಳು. ಗ್ರಾಮ ಪಂಚಾಯಿತಿಯ ಕೆಲ ಅಧಿಕಾರಿಗಳು, ಸದಸ್ಯರು ಅವರ ಜತೆ ಶಾಮೀಲಾಗಿರುವ ಗುಮಾನಿ ಇದೆ. ಪ್ರಭಾವ ಬಳಸಿ ನಮ್ಮ ವಿರುದ್ಧ ಸುಳ್ಳು ಕೇಸು ದಾಖಲಿಸಿದ್ದಾರೆ ಎಂದು ದೂರಿದ್ದಾರೆ.</p>.<p>ಈ ಬಗ್ಗೆ ಸಮಗ್ರವಾಗಿ ಪರಿಶೀಲನೆ ಮಾಡಬೇಕು. ನಿರ್ಮಾಣ ಹಂತದಲ್ಲಿರುವ ಅಕ್ರಮ ಕಟ್ಟಡ ತೆರವುಗೊಳಿಸಲು ಕ್ರಮ ವಹಿಸಬೇಕು. ಅಕ್ರಮದಲ್ಲಿ ಶಾಮೀಲಾಗಿರುವವರ ವಿರುದ್ಧವೂ ಕ್ರಮ ಜರುಗಿಸಬೇಕು. ಸರ್ಕಾರಿ ಜಾಗವನ್ನು ರಕ್ಷಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p><strong>ಸ್ಥಳ ಪರಿಶೀಲಿಸಿ ಕ್ರಮ: ತಹಶೀಲ್ದಾರ್</strong><br />‘ಕಟ್ಟಡ ನಿರ್ಮಾಣ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ತರೀಕೆರೆ ಪೊಲೀಸರಿಗೆ ದೂರು ನೀಡಿದ್ದೇವೆ. ಆದರೆ, ಆವರು ಎಫ್ಐಆರ್ ಮಾಡಿಲ್ಲ’ ಎಂದು ತಹಶೀಲ್ದಾರ್ ಗೀತಾ ತಿಳಿಸಿದರು.</p>.<p>‘ಗುರುವಾರ ಸ್ಥಳ ಪರಿಶೀಲನೆ ಮಾಡುತ್ತೇವೆ. ಭೂಕಬಳಿಕೆ ದೂರು ದಾಖಲಿಸಲು ಗಮನ ಹರಿಸುತ್ತೇವೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>