ನಿವೇಶನ ವಿತರಿಸಲು ಹಿಳುವಳ್ಳಿ ಗ್ರಾಮದ ಗ್ರಾಮಠಾಣಾ ವ್ಯಾಪ್ತಿಯ 9 ಎಕರೆಯಲ್ಲಿ 2009–10ನೇ ಸಾಲಿನಲ್ಲಿ ಜಾಗ ಗುರುತಿಸಿ, ಬಡಾವಣೆ ನಿರ್ಮಿಸಲಾಗಿತ್ತು. ನಂತರ ಆ ಜಾಗದ ಬಗ್ಗೆ ತಕಾರರು ಇದ್ದುದರಿಂದ ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿತ್ತು. ನಂತರ ನ್ಯಾಯಾಲಯದಲ್ಲಿ ಪಟ್ಟಣ ಪಂಚಾಯಿತಿ ಪರ ತೀರ್ಪು ಬಂದಿದ್ದ ರಿಂದ 2014ರಲ್ಲಿ ಆಶ್ರಯ ನಿವೇಶನಕ್ಕೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು, 400 ಜನ ಅರ್ಜಿ ಸಲ್ಲಿಸಿದ್ದರು. ಆದರೆ, ಅಂದು ಆಡಳಿತದಲ್ಲಿದ್ದವರ ನಿರ್ಲಕ್ಷ್ಯದಿಂದ ನಿವೇಶನ ಹಂಚಿಕೆ ನನೆಗುದಿಗೆ ಬಿತ್ತು ಎಂಬುದು ನಿವೇಶನ ರಹಿತ ಆರೋಪ.