<p><strong>ಕಳಸ</strong>: ಅಂಬಾತೀರ್ಥದ ಬಳಿ ವಾಸವಾಗಿರುವ ಗಿರಿಜನ ಕುಟುಂಬಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಭದ್ರಾ ನದಿಯಿಂದ ಕೂಗಳತೆ ದೂರದಲ್ಲಿ ಈ ಗ್ರಾಮ ಇದ್ದರೂ, ಇಲ್ಲಿನ ನಿವಾಸಿಗಳು ನದಿಯಿಂದ ನೀರನ್ನು ಹೊತ್ತು ತಂದು ಬಳಸಬೇಕಿದೆ.</p>.<p>ಅಂಬಾತೀರ್ಥ,ಮುಮ್ಮಗೆ ಮತ್ತು ಆಸುಪಾಸಿನ ಕುಟುಂಬಗಳಿಗೆ ನೀರು ಪೂರೈಸಲು ಇಲ್ಲಿ ಟ್ಯಾಂಕ್ ನಿರ್ಮಿಸಿ ವರ್ಷಗಳೇ ಕಳೆದಿವೆ. ಆದರೆ, ಗ್ರಾಮ ಪಂಚಾಯಿತಿ ವತಿಯಿಂದ ಈ ಟ್ಯಾಂಕ್ಗೆ ನೀರು ಪೂರೈಸುವ ಕೆಲಸ ಆಗಿಲ್ಲ. </p>.<p>‘ಅಂಬಾತೀರ್ಥ ಪ್ರದೇಶದಲ್ಲಿ ಎರಡು ದಶಕಗಳಿಂದ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ, ಗ್ರಾಮ ಪಂಚಾಯಿತಿ ಆಡಳಿತ, ಜನಪ್ರತಿನಿಧಿಗಳು ಸಮಸ್ಯೆ ಪರಿಹರಿಸಲು ಸ್ಪಂದಿಸುತ್ತಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಅನ್ನಪೂರ್ಣಾ ಶ್ರೀಧರ್ ದೂರಿದರು.</p>.<p>ಇಲ್ಲಿನ ಬಡ ಕಾರ್ಮಿಕರು ಕೆಲಸ ಮುಗಿಸಿ ಬಂದು ಹೊಳೆಯಿಂದ ನೀರು ಹೊತ್ತು ತರುತ್ತಾರೆ. ಅವರ ಸಂಕಷ್ಟ ನಿವಾರಿಸಲು ಯಾರಿಗೂ ಬದ್ಧತೆ ಇಲ್ಲ ಎಂದು ಅವರು ಹೇಳಿದರು.</p>.<p>ನೀರಿನ ಸಮಸ್ಯೆ ಜತೆಗೆ ಹದಗೆಟ್ಟ ರಸ್ತೆ ಸಮಸ್ಯೆಯನ್ನೂ ಇಲ್ಲಿನ ನಿವಾಸಿಗಳು ಅನುಭವಿಸುತ್ತಿದ್ದಾರೆ. ರಸ್ತೆ ಸರಿ ಇಲ್ಲದ ಕಾರಣ ಆಟೊದವರು ಕೂಡ ಇಲ್ಲಿಗೆ ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಾರೆ. ನೀರು ಮತ್ತು ರಸ್ತೆ ಸಮಸ್ಯೆಯನ್ನು ಬಗೆಹರಿಸಬೇಕು ಎನ್ನುತ್ತಾರೆ ಗಿರಿಜನರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ಅಂಬಾತೀರ್ಥದ ಬಳಿ ವಾಸವಾಗಿರುವ ಗಿರಿಜನ ಕುಟುಂಬಗಳು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಭದ್ರಾ ನದಿಯಿಂದ ಕೂಗಳತೆ ದೂರದಲ್ಲಿ ಈ ಗ್ರಾಮ ಇದ್ದರೂ, ಇಲ್ಲಿನ ನಿವಾಸಿಗಳು ನದಿಯಿಂದ ನೀರನ್ನು ಹೊತ್ತು ತಂದು ಬಳಸಬೇಕಿದೆ.</p>.<p>ಅಂಬಾತೀರ್ಥ,ಮುಮ್ಮಗೆ ಮತ್ತು ಆಸುಪಾಸಿನ ಕುಟುಂಬಗಳಿಗೆ ನೀರು ಪೂರೈಸಲು ಇಲ್ಲಿ ಟ್ಯಾಂಕ್ ನಿರ್ಮಿಸಿ ವರ್ಷಗಳೇ ಕಳೆದಿವೆ. ಆದರೆ, ಗ್ರಾಮ ಪಂಚಾಯಿತಿ ವತಿಯಿಂದ ಈ ಟ್ಯಾಂಕ್ಗೆ ನೀರು ಪೂರೈಸುವ ಕೆಲಸ ಆಗಿಲ್ಲ. </p>.<p>‘ಅಂಬಾತೀರ್ಥ ಪ್ರದೇಶದಲ್ಲಿ ಎರಡು ದಶಕಗಳಿಂದ ನೀರಿನ ಸಮಸ್ಯೆ ತೀವ್ರವಾಗಿದೆ. ಆದರೆ, ಗ್ರಾಮ ಪಂಚಾಯಿತಿ ಆಡಳಿತ, ಜನಪ್ರತಿನಿಧಿಗಳು ಸಮಸ್ಯೆ ಪರಿಹರಿಸಲು ಸ್ಪಂದಿಸುತ್ತಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯೆ ಅನ್ನಪೂರ್ಣಾ ಶ್ರೀಧರ್ ದೂರಿದರು.</p>.<p>ಇಲ್ಲಿನ ಬಡ ಕಾರ್ಮಿಕರು ಕೆಲಸ ಮುಗಿಸಿ ಬಂದು ಹೊಳೆಯಿಂದ ನೀರು ಹೊತ್ತು ತರುತ್ತಾರೆ. ಅವರ ಸಂಕಷ್ಟ ನಿವಾರಿಸಲು ಯಾರಿಗೂ ಬದ್ಧತೆ ಇಲ್ಲ ಎಂದು ಅವರು ಹೇಳಿದರು.</p>.<p>ನೀರಿನ ಸಮಸ್ಯೆ ಜತೆಗೆ ಹದಗೆಟ್ಟ ರಸ್ತೆ ಸಮಸ್ಯೆಯನ್ನೂ ಇಲ್ಲಿನ ನಿವಾಸಿಗಳು ಅನುಭವಿಸುತ್ತಿದ್ದಾರೆ. ರಸ್ತೆ ಸರಿ ಇಲ್ಲದ ಕಾರಣ ಆಟೊದವರು ಕೂಡ ಇಲ್ಲಿಗೆ ಬಾಡಿಗೆಗೆ ಬರಲು ಹಿಂದೇಟು ಹಾಕುತ್ತಾರೆ. ನೀರು ಮತ್ತು ರಸ್ತೆ ಸಮಸ್ಯೆಯನ್ನು ಬಗೆಹರಿಸಬೇಕು ಎನ್ನುತ್ತಾರೆ ಗಿರಿಜನರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>