<p><strong>ತರೀಕೆರೆ: </strong>ತಾಲ್ಲೂಕಿನ ಎಂ.ಸಿ.ಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ರಸ್ತೆ ಮಧ್ಯೆ ಇಟ್ಟಿದ್ದ ಪ್ರಕರಣವು ತಾಲ್ಲೂಕು ಆಡಳಿತದ ಮಧ್ಯಪ್ರವೇಶದಿಂದಾಗಿ ಶಾಂತ ರೀತಿಯಿಂದ ಬಗೆಹರಿದಿದೆ.</p>.<p>ರಾಷ್ಟ್ರೀಯ ಹೆದ್ದಾರಿ 206ರಲ್ಲಿರುವ ಎಂ.ಸಿ.ಹಳ್ಳಿ ಗ್ರಾಮದಲ್ಲಿನ ಭದ್ರಗಿರಿ ದೇವಸ್ಥಾನಕ್ಕೆ ಹೋಗುವ ಮಹಾದ್ವಾರದ ರಸ್ತೆ ಮಧ್ಯೆ ಸುಮಾರು 20 ಅಡಿ ಎತ್ತರವುಳ್ಳ ಹೊದಿಕೆ ಹಾಕಲಾಗಿದ್ದ ಸ್ಥಿತಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಇಡಲಾಗಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ತಹಶೀಲ್ದಾರ್ ಸಿ.ಜಿ.ಗೀತಾ, ಡಿವೈಎಸ್ಪಿ ರೇಣುಕ ಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಅವರು ಗ್ರಾಮದ ದಲಿತ ಸಂಘಟನೆಯೊಂದಿಗೆ ಮಾತುಕತೆ ನಡೆಸಿ, ಪ್ರತಿಮೆಯನ್ನು ತೆರವು ಮಾಡಲಾಗಿದ್ದು ಮಹಾದ್ವಾರದ ಪಕ್ಕದಲ್ಲಿನ ಸ್ಥಳದಲ್ಲಿ ಇರಿಸಲಾಗಿದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ತಹಶೀಲ್ದಾರ್, ‘ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿರಲಿಲ್ಲ. ಹೆದ್ದಾರಿ ಮಧ್ಯೆ ಇಟ್ಟಿರುವುದು ಸರಿಯಲ್ಲ. ಪ್ರತಿಮೆ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಬೇರೆ ಸ್ಥಳದಲ್ಲಿ ಸ್ಥಾಪಿಸಲಿ ಎಂದು ಗ್ರಾಮದ ಮುಖಂಡರಿಗೆ ತಿಳಿಸಲಾಗಿದೆ’ ಎಂದು ಹೇಳಿದರು.</p>.<p>ಮಾದಿಗ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ‘ಹೆದ್ದಾರಿ ವಿಸ್ತರಣೆಯಾದ ನಂತರ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ಮಾಡಿ, ತಾಲ್ಲೂಕು ಆಡಳಿತವು ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಹೇಳಿದರು.</p>.<p>ಮುಖಂಡ ಸುರೇಶ್ ಪಾಪಣ್ಣ, ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್, ರಾಮಚಂದ್ರಪ್ಪ, ಓಂಕಾರಪ್ಪ, ಗಿರೀಶ್ ಸ್ಥಳದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತರೀಕೆರೆ: </strong>ತಾಲ್ಲೂಕಿನ ಎಂ.ಸಿ.ಹಳ್ಳಿ ಗ್ರಾಮದಲ್ಲಿ ರಾತ್ರೋರಾತ್ರಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯನ್ನು ರಸ್ತೆ ಮಧ್ಯೆ ಇಟ್ಟಿದ್ದ ಪ್ರಕರಣವು ತಾಲ್ಲೂಕು ಆಡಳಿತದ ಮಧ್ಯಪ್ರವೇಶದಿಂದಾಗಿ ಶಾಂತ ರೀತಿಯಿಂದ ಬಗೆಹರಿದಿದೆ.</p>.<p>ರಾಷ್ಟ್ರೀಯ ಹೆದ್ದಾರಿ 206ರಲ್ಲಿರುವ ಎಂ.ಸಿ.ಹಳ್ಳಿ ಗ್ರಾಮದಲ್ಲಿನ ಭದ್ರಗಿರಿ ದೇವಸ್ಥಾನಕ್ಕೆ ಹೋಗುವ ಮಹಾದ್ವಾರದ ರಸ್ತೆ ಮಧ್ಯೆ ಸುಮಾರು 20 ಅಡಿ ಎತ್ತರವುಳ್ಳ ಹೊದಿಕೆ ಹಾಕಲಾಗಿದ್ದ ಸ್ಥಿತಿಯಲ್ಲಿದ್ದ ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಇಡಲಾಗಿತ್ತು.</p>.<p>ವಿಷಯ ತಿಳಿದು ಸ್ಥಳಕ್ಕೆ ಬಂದ ತಹಶೀಲ್ದಾರ್ ಸಿ.ಜಿ.ಗೀತಾ, ಡಿವೈಎಸ್ಪಿ ರೇಣುಕ ಪ್ರಸಾದ್, ಪೊಲೀಸ್ ಇನ್ಸ್ಪೆಕ್ಟರ್ ಸುರೇಶ್ ಅವರು ಗ್ರಾಮದ ದಲಿತ ಸಂಘಟನೆಯೊಂದಿಗೆ ಮಾತುಕತೆ ನಡೆಸಿ, ಪ್ರತಿಮೆಯನ್ನು ತೆರವು ಮಾಡಲಾಗಿದ್ದು ಮಹಾದ್ವಾರದ ಪಕ್ಕದಲ್ಲಿನ ಸ್ಥಳದಲ್ಲಿ ಇರಿಸಲಾಗಿದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ತಹಶೀಲ್ದಾರ್, ‘ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿರಲಿಲ್ಲ. ಹೆದ್ದಾರಿ ಮಧ್ಯೆ ಇಟ್ಟಿರುವುದು ಸರಿಯಲ್ಲ. ಪ್ರತಿಮೆ ಸ್ಥಾಪನೆಗೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು ಬೇರೆ ಸ್ಥಳದಲ್ಲಿ ಸ್ಥಾಪಿಸಲಿ ಎಂದು ಗ್ರಾಮದ ಮುಖಂಡರಿಗೆ ತಿಳಿಸಲಾಗಿದೆ’ ಎಂದು ಹೇಳಿದರು.</p>.<p>ಮಾದಿಗ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ್ ಮಾತನಾಡಿ, ‘ಹೆದ್ದಾರಿ ವಿಸ್ತರಣೆಯಾದ ನಂತರ ಡಾ.ಬಿ.ಆರ್.ಅಂಬೇಡ್ಕರ್ ವೃತ್ತವನ್ನು ಮಾಡಿ, ತಾಲ್ಲೂಕು ಆಡಳಿತವು ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ’ ಎಂದು ಹೇಳಿದರು.</p>.<p>ಮುಖಂಡ ಸುರೇಶ್ ಪಾಪಣ್ಣ, ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಸುನೀಲ್, ರಾಮಚಂದ್ರಪ್ಪ, ಓಂಕಾರಪ್ಪ, ಗಿರೀಶ್ ಸ್ಥಳದಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>