ವೇಲಾಯುಧನ್ ಮತ್ತು ರುಕ್ಮಿಣಿ ಅವರು ಸಂಬಂಧಪಟ್ಟ ಇಲಾಖೆಗೆ ಎಲ್ಲ ದಾಖಲೆಗಳನ್ನು ನೀಡಿ, ಪರಿಹಾರಕ್ಕಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ. ಮನೆ ಸಂಪೂರ್ಣ ಉರುಳಿ ಬಿದ್ದಿದ್ದರೂ, ಮನೆ ದುರಸ್ತಿಗಾಗಿ ₹1 ಲಕ್ಷ ಅನುದಾನ ನೀಡಲಾಗಿದೆ. ಆ ಹಣದಲ್ಲಿ ಮನೆ ನಿರ್ಮಿಸಲು ಸಾಧ್ಯವಾಗದೆ ಸರ್ಕಾರಿ ಕಚೇರಿಗಳಿಗೆ ಅಲೆದು ಅಲೆದು ಸಾಕಾಗಿ, ಅಂತಿಮವಾಗಿ ಪಟ್ಟಣದಲ್ಲಿ ಪಾಳು ಬಿದ್ದ ಲೋಕೋಪಯೋಗಿ ಇಲಾಖೆಯ ವಸತಿಗೃಹವನ್ನು ಆಶ್ರಯಿಸಿದೆ.