ಚಿಕ್ಕಮಗಳೂರು: ಮತ್ತೊಂದು ಆನೆ ಸೆರೆ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬೆಳಗೋಡು ಭಾಗದಲ್ಲಿ ಶನಿವಾರ ಮತ್ತೊಂದು ಗಂಡಾನೆ ಸೆರೆ ಸಿಕ್ಕಿದೆ.
ಮತ್ತಿಗೂಡು, ದುಬಾರೆ ಶಿಬಿರದ ಆರು ಆನೆಗಳು ಮತ್ತು ಅರಣ್ಯ ಅಧಿಕಾರಿಗಳು, ಸಿಬ್ಬಂದಿ ತಂಡ ಆನೆ ಸೆರೆ ಕಾರ್ಯಾಚರಣೆಯಲ್ಲಿ ತೊಡಗಿದೆ. ಆನೆಯ ಚಲನವಲನಗಳ ಮೇಲೆ ನಿಗಾ ಇಡಲಾಗಿತ್ತು. ತೋಟ ಭಾಗದಲ್ಲಿ ಸಾಗುವಾಗ ಕಾರ್ಯಾಚರಣೆ ನಡೆಸಿ ಹಿಡಿಯಲಾಗಿದೆ.
‘ಆನೆ ಸೆರೆ ಸಿಕ್ಕಿದೆ. ಅದನ್ನು ಮತ್ತಿಗೂಡು ಶಿಬಿರಕ್ಕೆ ಸಾಗಿಸಲು ಚಿಂತನೆ ನಡೆದಿದೆ’ ಎಂದು ಚಿಕ್ಕಮಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಎಂ.ಸಿ.ಸಿದ್ರಾಮಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.
ಉಪಟಳ ನೀಡುತ್ತಿವೆ ಎಂದು ಸರ್ಕಾರವು ಮೂರು ಆನೆಗಳ ಸೆರೆಗೆ ಆದೇಶ ನೀಡಿದ್ದು, ನ.28ರಿಂದ ಸೆರೆ ಕಾರ್ಯಾಚರಣೆ ಶುರುವಾಗಿದೆ. ಮೊದಲ ದಿನ ಒಂದು ಆನೆ ಸೆರೆ ಸಿಕ್ಕಿತ್ತು. ಅದನ್ನು ಸಕ್ರೆಬೈಲ್ ಶಿಬಿರಕ್ಕೆ ಸಾಗಿಸಲಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.