<p><strong>ಶೃಂಗೇರಿ</strong>: ‘ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಶೃಂಗೇರಿ ಪೊಲೀಸ್ ಪಿಎಸ್ಐ ಅಭಿಷೇಕ್ ಹೇಳಿದರು.</p>.<p>ಶೃಂಗೇರಿಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ಅಂತರರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ವೀರಪ್ಪ ಗೌಡ (ಶಂಕರಚಾರ್ಯ ವೃತ್ತ)ದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿ ಅವರು ಮಾತನಾಡಿದರು.</p>.<p>ಉತ್ತಮ ಆಹಾರ ಪದ್ಧತಿ, ಸರಳ ಜೀವನ ನಡೆಸಬೇಕು. ಕೆಟ್ಟ ಅಭ್ಯಾಸಗಳಿಂದ ದೂರವಿದ್ದು, ಜೀವನದಲ್ಲಿ ಗುರಿ ಇಟ್ಟುಕೊಂಡರೆ ಮಾತ್ರ ಮನುಷ್ಯನ ಬದುಕು ಸಾರ್ಥಕ ಎಂದರು.</p>.<p>ಜೆಸಿಬಿಎಂ ಪಿಯು ಕಾಲೇಜಿನ ಪ್ರಾಂಶುಪಾಲ ಎ.ಜಿ.ಪ್ರಶಾಂತ್ ಮಾತನಾಡಿ, ‘ಮಾದಕ ವಸ್ತುಗಳ ಸೇವನೆ ಹಾನಿಕಾರಕ ಎಂಬ ಅರಿವು ಇದ್ದರೂ ಒತ್ತಡದಲ್ಲಿ ಸೇವಿಸುವರ ಸಂಖ್ಯೆ ಹೆಚ್ಚಾಗುತ್ತದೆ. ಯುವ ಪೀಳಿಗೆ ದೇಶದ ಸಂಪತ್ತು. ಬದುಕನ್ನು ಕುಟುಂಬಕ್ಕಾಗಿ, ದೇಶಕ್ಕಾಗಿ ಮೀಸಲಿಡಬೇಕು’ ಎಂದರು.</p>.<p>ಸಂಸ್ಕೃತ ಕಾಲೇಜಿನ ರಾಮಚಂದ್ರ ಮಾತನಾಡಿದರು.</p>.<p>ಪೊಲೀಸ್ ಇಲಾಖೆಯ ನಾಗರಾಜ್, ಜೆಸಿಬಿಎಂ ಕಾಲೇಜಿನ ಉಪನ್ಯಾಸಕರಾದ ಚಂದ್ರಕಲಾ, ಅಶ್ವಿನಿ, ಜೆಸಿಬಿಎಂ ಕಾಲೇಜು ಹಾಗೂ ರಾಜೀವ್ ಗಾಂಧಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ</strong>: ‘ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ’ ಎಂದು ಶೃಂಗೇರಿ ಪೊಲೀಸ್ ಪಿಎಸ್ಐ ಅಭಿಷೇಕ್ ಹೇಳಿದರು.</p>.<p>ಶೃಂಗೇರಿಯ ಪೊಲೀಸ್ ಇಲಾಖೆ ಆಯೋಜಿಸಿದ್ದ ಮಾದಕ ವಸ್ತು ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ಅಂತರರಾಷ್ಟ್ರೀಯ ದಿನಾಚರಣೆಯ ಪ್ರಯುಕ್ತ ವೀರಪ್ಪ ಗೌಡ (ಶಂಕರಚಾರ್ಯ ವೃತ್ತ)ದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಭೋಧಿಸಿ ಅವರು ಮಾತನಾಡಿದರು.</p>.<p>ಉತ್ತಮ ಆಹಾರ ಪದ್ಧತಿ, ಸರಳ ಜೀವನ ನಡೆಸಬೇಕು. ಕೆಟ್ಟ ಅಭ್ಯಾಸಗಳಿಂದ ದೂರವಿದ್ದು, ಜೀವನದಲ್ಲಿ ಗುರಿ ಇಟ್ಟುಕೊಂಡರೆ ಮಾತ್ರ ಮನುಷ್ಯನ ಬದುಕು ಸಾರ್ಥಕ ಎಂದರು.</p>.<p>ಜೆಸಿಬಿಎಂ ಪಿಯು ಕಾಲೇಜಿನ ಪ್ರಾಂಶುಪಾಲ ಎ.ಜಿ.ಪ್ರಶಾಂತ್ ಮಾತನಾಡಿ, ‘ಮಾದಕ ವಸ್ತುಗಳ ಸೇವನೆ ಹಾನಿಕಾರಕ ಎಂಬ ಅರಿವು ಇದ್ದರೂ ಒತ್ತಡದಲ್ಲಿ ಸೇವಿಸುವರ ಸಂಖ್ಯೆ ಹೆಚ್ಚಾಗುತ್ತದೆ. ಯುವ ಪೀಳಿಗೆ ದೇಶದ ಸಂಪತ್ತು. ಬದುಕನ್ನು ಕುಟುಂಬಕ್ಕಾಗಿ, ದೇಶಕ್ಕಾಗಿ ಮೀಸಲಿಡಬೇಕು’ ಎಂದರು.</p>.<p>ಸಂಸ್ಕೃತ ಕಾಲೇಜಿನ ರಾಮಚಂದ್ರ ಮಾತನಾಡಿದರು.</p>.<p>ಪೊಲೀಸ್ ಇಲಾಖೆಯ ನಾಗರಾಜ್, ಜೆಸಿಬಿಎಂ ಕಾಲೇಜಿನ ಉಪನ್ಯಾಸಕರಾದ ಚಂದ್ರಕಲಾ, ಅಶ್ವಿನಿ, ಜೆಸಿಬಿಎಂ ಕಾಲೇಜು ಹಾಗೂ ರಾಜೀವ್ ಗಾಂಧಿ ರಾಷ್ಟ್ರೀಯ ಸಂಸ್ಕೃತ ವಿದ್ಯಾಪೀಠದ ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>