<p>ಕೊಪ್ಪ: ‘ರ್ಯಾಗಿಂಗ್ ಒಂದು ಪಿಡುಗಾಗಿದ್ದು, ಉನ್ನತ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಂದ ಹೆಚ್ಚು ನಡೆಯುವ ಅಪವಾದಗಳಿವೆ. ರ್ಯಾಗಿಂಗ್ಗೆ ಕಿರಿಯ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಬೇಸರದ ಸಂಗತಿ ಎಂದು ಪಿಎಸ್ಐ ಜಿ.ಕೆ.ಬಸವರಾಜ್ ಹೇಳಿದರು.</p>.<p>ಪಟ್ಟಣ ಸಮೀಪದ ಎ.ಎಲ್.ಎನ್.ರಾವ್ ಸ್ಮಾರಕ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ರ್ಯಾಗಿಂಗ್ ವಿರುದ್ಧ ದಿನ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳು ಕಾಲೇಜಿಗೆ ಅಥವಾ ಹಾಸ್ಟೆಲ್ಗೆ ಹೊಸದಾಗಿ ಸೇರ್ಪಡೆಯಾದಾಗ ತಮ್ಮ ಕುಟುಂಬದ ಸದಸ್ಯರಂತೆ ಕಾಣಬೇಕು ಎಂದರು.</p>.<p>'ವಿದ್ಯಾರ್ಥಿಗಳು ದೇಶ, ಸಂಸ್ಕೃತಿ ಬಗ್ಗೆ ಗೌರವ, ಪ್ರೀತಿ ಬೆಳೆಸಿಕೊಂಡಾಗ ರ್ಯಾಗಿಂಗ್ನಂತಹ ಕ್ರೌರ್ಯವನ್ನು ತಡೆಗಟ್ಟಬಹುದು. ರ್ಯಾಗಿಂಗ್ ತಡೆಯುವಲ್ಲಿ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯೂ ಮಹತ್ವದ್ದಾಗಿದೆ. ರ್ಯಾಗಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ’ ಎಂದರು. </p>.<p>ಪಿಎಸ್ಐ ಬಸವರಾಜ್ ಅವರನ್ನು ಗೌರವಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ ಡಾ.ಡಿ.ಕೆ.ಮಿಶ್ರಾ, ಡಾ.ಜಗದೀಶ್ ಮಯ್ಯ, ಡಾ.ಪೂಜಾ ಹುಯಿಲಗೋಳ, ಉಪನ್ಯಾಸಕರಾದ ಸಿ.ಎಚ್.ಪ್ರಕಾಶ್, ಡಾ.ಶ್ರದ್ಧಾ, ಡಾ.ಸುಕೃತ್, ಪೊಲೀಸ್ ಸಿಬ್ಬಂದಿ ಮಥಾಯಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪ: ‘ರ್ಯಾಗಿಂಗ್ ಒಂದು ಪಿಡುಗಾಗಿದ್ದು, ಉನ್ನತ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಂದ ಹೆಚ್ಚು ನಡೆಯುವ ಅಪವಾದಗಳಿವೆ. ರ್ಯಾಗಿಂಗ್ಗೆ ಕಿರಿಯ ವಿದ್ಯಾರ್ಥಿಗಳು ಬಲಿಯಾಗುತ್ತಿರುವುದು ಬೇಸರದ ಸಂಗತಿ ಎಂದು ಪಿಎಸ್ಐ ಜಿ.ಕೆ.ಬಸವರಾಜ್ ಹೇಳಿದರು.</p>.<p>ಪಟ್ಟಣ ಸಮೀಪದ ಎ.ಎಲ್.ಎನ್.ರಾವ್ ಸ್ಮಾರಕ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ರ್ಯಾಗಿಂಗ್ ವಿರುದ್ಧ ದಿನ ಆಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳು ಕಾಲೇಜಿಗೆ ಅಥವಾ ಹಾಸ್ಟೆಲ್ಗೆ ಹೊಸದಾಗಿ ಸೇರ್ಪಡೆಯಾದಾಗ ತಮ್ಮ ಕುಟುಂಬದ ಸದಸ್ಯರಂತೆ ಕಾಣಬೇಕು ಎಂದರು.</p>.<p>'ವಿದ್ಯಾರ್ಥಿಗಳು ದೇಶ, ಸಂಸ್ಕೃತಿ ಬಗ್ಗೆ ಗೌರವ, ಪ್ರೀತಿ ಬೆಳೆಸಿಕೊಂಡಾಗ ರ್ಯಾಗಿಂಗ್ನಂತಹ ಕ್ರೌರ್ಯವನ್ನು ತಡೆಗಟ್ಟಬಹುದು. ರ್ಯಾಗಿಂಗ್ ತಡೆಯುವಲ್ಲಿ ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯೂ ಮಹತ್ವದ್ದಾಗಿದೆ. ರ್ಯಾಗಿಂಗ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶವಿದೆ’ ಎಂದರು. </p>.<p>ಪಿಎಸ್ಐ ಬಸವರಾಜ್ ಅವರನ್ನು ಗೌರವಿಸಲಾಯಿತು. ಕಾಲೇಜಿನ ಉಪ ಪ್ರಾಂಶುಪಾಲ ಡಾ.ಡಿ.ಕೆ.ಮಿಶ್ರಾ, ಡಾ.ಜಗದೀಶ್ ಮಯ್ಯ, ಡಾ.ಪೂಜಾ ಹುಯಿಲಗೋಳ, ಉಪನ್ಯಾಸಕರಾದ ಸಿ.ಎಚ್.ಪ್ರಕಾಶ್, ಡಾ.ಶ್ರದ್ಧಾ, ಡಾ.ಸುಕೃತ್, ಪೊಲೀಸ್ ಸಿಬ್ಬಂದಿ ಮಥಾಯಿ, ಕಾಲೇಜು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>