<p><strong>ಕೊಪ್ಪ:</strong> ಇಲ್ಲಿನ ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಘಟಕಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಸೋಮವಾರ ಭೇಟಿ ನೀಡಿ, ಕ್ಲಬ್ನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಲಕ್ಕವಳ್ಳಿ ಮಂಜಪ್ಪ ನಾಯಕ್ ಸ್ಮಾರಕ ಲಯನ್ಸ್ ಸೇವಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಲಯನ್ಸ್ ಕ್ಲಬ್ ವತಿಯಿಂದ ಅತಿವೃಷ್ಟಿ ಬಾಧಿತರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನಲ್ಲಿ ಮೊಬೈಲ್ ಕಿಚನ್ ಆರಂಭಿಸಲಾಗಿತ್ತು. ಸಾವಿರಾರು ಮಂದಿ ಇದರ ಪ್ರಯೋಜನ ಪಡೆದಿದ್ದಾರೆ' ಎಂದರು.</p>.<p>ಅನಿತಾ ಎನ್.ರಾವ್ ಮಾತನಾಡಿ, 'ಲಯನ್ಸ್ ಸಹ್ಯಾದ್ರಿ ಸಂಸ್ಥೆಯಲ್ಲಿ 72 ಮಂದಿ ಸದಸ್ಯರಿದ್ದಾರೆ.<br> ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ₹950ಕ್ಕೆ ಡಯಾಲಿಸಿಸ್ ಮಾಡಲಾಗುತ್ತಿದೆ. ಇದಕ್ಕಾಗಿ ದಾನಿಗಳ ನೆರವು ಪಡೆಯಲಾಗಿದೆ. ಇನ್ನಷ್ಟು ದಾನಿಗಳ ನೆರವು ಲಭಿಸಿದರೆ ರೋಗಿಗಳಿಗೆ ₹600 ದರಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ' ಎಂದರು.</p>.<p>ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಅಧ್ಯಕ್ಷ ಡಿ.ಎನ್.ಜಯಂತ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂತೋಷ್, ಖಜಾಂಚಿ ಕೆ.ಆರ್.ಚಂದ್ರಶೇಖರ್, ಕೆ.ಆರ್.ಗೋಪಾಲಗೌಡ, ನಟರಾಜ್ ಆರ್. ರಾವ್, ಎಚ್.ಎಸ್.ಕಳಸಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪ:</strong> ಇಲ್ಲಿನ ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಘಟಕಕ್ಕೆ ಲಯನ್ಸ್ ಜಿಲ್ಲಾ ಗವರ್ನರ್ ಭಾರತಿ ಬಿ.ಎಂ. ಸೋಮವಾರ ಭೇಟಿ ನೀಡಿ, ಕ್ಲಬ್ನ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಲಕ್ಕವಳ್ಳಿ ಮಂಜಪ್ಪ ನಾಯಕ್ ಸ್ಮಾರಕ ಲಯನ್ಸ್ ಸೇವಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ಲಯನ್ಸ್ ಕ್ಲಬ್ ವತಿಯಿಂದ ಅತಿವೃಷ್ಟಿ ಬಾಧಿತರಿಗೆ ನೆರವಾಗುವ ಉದ್ದೇಶದಿಂದ ಮಂಗಳೂರಿನಲ್ಲಿ ಮೊಬೈಲ್ ಕಿಚನ್ ಆರಂಭಿಸಲಾಗಿತ್ತು. ಸಾವಿರಾರು ಮಂದಿ ಇದರ ಪ್ರಯೋಜನ ಪಡೆದಿದ್ದಾರೆ' ಎಂದರು.</p>.<p>ಅನಿತಾ ಎನ್.ರಾವ್ ಮಾತನಾಡಿ, 'ಲಯನ್ಸ್ ಸಹ್ಯಾದ್ರಿ ಸಂಸ್ಥೆಯಲ್ಲಿ 72 ಮಂದಿ ಸದಸ್ಯರಿದ್ದಾರೆ.<br> ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ₹950ಕ್ಕೆ ಡಯಾಲಿಸಿಸ್ ಮಾಡಲಾಗುತ್ತಿದೆ. ಇದಕ್ಕಾಗಿ ದಾನಿಗಳ ನೆರವು ಪಡೆಯಲಾಗಿದೆ. ಇನ್ನಷ್ಟು ದಾನಿಗಳ ನೆರವು ಲಭಿಸಿದರೆ ರೋಗಿಗಳಿಗೆ ₹600 ದರಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ' ಎಂದರು.</p>.<p>ಲಯನ್ಸ್ ಕ್ಲಬ್ ಕೊಪ್ಪ ಸಹ್ಯಾದ್ರಿ ಅಧ್ಯಕ್ಷ ಡಿ.ಎನ್.ಜಯಂತ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಸಂತೋಷ್, ಖಜಾಂಚಿ ಕೆ.ಆರ್.ಚಂದ್ರಶೇಖರ್, ಕೆ.ಆರ್.ಗೋಪಾಲಗೌಡ, ನಟರಾಜ್ ಆರ್. ರಾವ್, ಎಚ್.ಎಸ್.ಕಳಸಪ್ಪ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>