ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮ ಪಂಚಾಯಿತಿ ಸದಸ್ಯನ ಕಾರ್ಯಕ್ಕೆ ಮೆಚ್ಚುಗೆ

ವಿಜಯೋತ್ಸವದ ಬದಲು ಶಾಲಾ ಆವರಣ ಸ್ವಚ್ಛತೆ
Last Updated 6 ಜನವರಿ 2021, 4:54 IST
ಅಕ್ಷರ ಗಾತ್ರ

ಶೃಂಗೇರಿ: ತಾಲ್ಲೂಕಿನ ಉಳುವೆಬೈಲು ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಮತ್ತು ಸಮೀಪದ ಉಳುವೆ ರಂಗ ಮಂದಿರವನ್ನು ಅಡ್ಡಗದ್ದೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಿಜೇತರಾದ ಹಂಚಲಿ ರಾಘವೇಂದ್ರ ಅವರು ತಮ್ಮ ಗೆಳೆಯರಜೊತೆಗೂಡಿ ಸ್ವಚ್ಛಗೊಳಿಸಿ ಗಮನ ಸೆಳೆದಿದ್ದಾರೆ.

ಕಾವಡಿ ಗ್ರಾಮದ ವಾರ್ಡ್‌ನಿಂದ ಗೆಲುವು ಸಾಧಿಸಿದ ರಾಘವೇಂದ್ರ ಅವರು ಯಾವುದೇ ಸಂಭ್ರಮಾಚರಣೆ ಮಾಡದೆ ಗ್ರಾಮದ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ.

ರಾಘವೇಂದ್ರ ಮಾತನಾಡಿ, ‘ಗ್ರಾಮೀಣ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಎಂಬ ಪರಿಕಲ್ಪನೆಯಿಂದ ಕಾರ್ಯನಿರ್ವಹಿಸುತ್ತೇನೆ. ಉಳುವೆಬೈಲು ಶಾಲೆ ಹತ್ತು ವರ್ಷಗಳಿಂದ ಮಕ್ಕಳ ಕೊರತೆಯಿಂದ ಮುಚ್ಚಲಾಗಿದೆ. ಹರಿಹರಪುರದ ಮಠದ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಓದಿದ ಈ ಶಾಲೆಗೆ 70 ವರ್ಷಗಳ ಇತಿಹಾಸವಿದೆ. ಸರ್ಕಾರ ಈ ಶಾಲೆಯಲ್ಲಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ತರಗತಿ ತೆರೆದರೆ ಮಕ್ಕಳನ್ನು ಶಾಲೆಗೆ ಸೇರಿಸುವ ಜವಾಬ್ದಾರಿ ನಿರ್ವಹಿ ಸುತ್ತೇನೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT