ರಾಘವೇಂದ್ರ ಮಾತನಾಡಿ, ‘ಗ್ರಾಮೀಣ ಅಭಿವೃದ್ಧಿಯಿಂದ ರಾಷ್ಟ್ರದ ಅಭಿವೃದ್ಧಿ ಎಂಬ ಪರಿಕಲ್ಪನೆಯಿಂದ ಕಾರ್ಯನಿರ್ವಹಿಸುತ್ತೇನೆ. ಉಳುವೆಬೈಲು ಶಾಲೆ ಹತ್ತು ವರ್ಷಗಳಿಂದ ಮಕ್ಕಳ ಕೊರತೆಯಿಂದ ಮುಚ್ಚಲಾಗಿದೆ. ಹರಿಹರಪುರದ ಮಠದ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಓದಿದ ಈ ಶಾಲೆಗೆ 70 ವರ್ಷಗಳ ಇತಿಹಾಸವಿದೆ. ಸರ್ಕಾರ ಈ ಶಾಲೆಯಲ್ಲಿ ಆಂಗ್ಲ ಹಾಗೂ ಕನ್ನಡ ಮಾಧ್ಯಮ ತರಗತಿ ತೆರೆದರೆ ಮಕ್ಕಳನ್ನು ಶಾಲೆಗೆ ಸೇರಿಸುವ ಜವಾಬ್ದಾರಿ ನಿರ್ವಹಿ ಸುತ್ತೇನೆ. ಈ ಕುರಿತು ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ’ ಎಂದರು.