<p><strong>ಚಿಕ್ಕಮಗಳೂರು: </strong>‘ರಾಜ್ಯದಲ್ಲಿ ಈ ವರ್ಷ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡಗಳನ್ನು ₹ 200 ಕೋಟಿ ನಿರ್ಮಿಸಲಾಗುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘₹ 50 ಕೋಟಿ ವೆಚ್ಚದಲ್ಲಿ ಅಗ್ನಿ ಶಾಮಕ ಠಾಣೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸರಿಗೆ 10 ಸಾವಿರ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ. ಈ ಬಾಬ್ತಿಗೆ ₹ 2 ಸಾವಿರ ಕೋಟಿ ಮೀಸಲಿಡಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.<br />‘ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಒಗ್ಗೂಡಿ ಸ್ಪರ್ಧಿಸಿದ್ದವು. ಚುನಾವಣೆಯಲ್ಲಿ ಗೆದ್ದ ನಂತರ ಎಂಟು ಪಕ್ಷಗಳ ತಂಡ ಮಾಡಿಕೊಂಡು ಬಿಜೆಪಿಯಿಂದ ದೂರಾಯಿತು. ಬಹಳ ದಿನ ಅವರ ಮೈತ್ರಿ ಇರಲ್ಲ ಅನಿಸಿತ್ತು. ಈಗ ಅದು ಆಗಿದೆ. ಬೆಳವಣಿಗೆಗಳನ್ನು ಕಾದು ನೋಡುತ್ತೇವೆ. ’ ಎಂದು ಉತ್ತರಿಸಿದರು.</p>.<p>‘ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದನ್ನು ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ಹೇಳಿದ್ದರೆ ಒಪ್ಪಲಾಗದು. ವಿರೋಧ ಪಕ್ಷದವರಾಗಿ ಟೀಕೆ ಮಾಡಬೇಕು ಎಂದು ಟೀಕೆ ಮಾಡಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>‘ರಾಜ್ಯದಲ್ಲಿ ಈ ವರ್ಷ 100 ಪೊಲೀಸ್ ಠಾಣೆಗಳಿಗೆ ಹೊಸ ಕಟ್ಟಡಗಳನ್ನು ₹ 200 ಕೋಟಿ ನಿರ್ಮಿಸಲಾಗುತ್ತಿದೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘₹ 50 ಕೋಟಿ ವೆಚ್ಚದಲ್ಲಿ ಅಗ್ನಿ ಶಾಮಕ ಠಾಣೆ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಪೊಲೀಸರಿಗೆ 10 ಸಾವಿರ ವಸತಿಗೃಹಗಳನ್ನು ನಿರ್ಮಿಸಲಾಗುತ್ತಿದೆ. ಈ ಬಾಬ್ತಿಗೆ ₹ 2 ಸಾವಿರ ಕೋಟಿ ಮೀಸಲಿಡಲಾಗಿದೆ. ಪೊಲೀಸರಿಗೆ ಸುಸಜ್ಜಿತವಾದ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.<br />‘ಮಹಾರಾಷ್ಟ್ರ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಒಗ್ಗೂಡಿ ಸ್ಪರ್ಧಿಸಿದ್ದವು. ಚುನಾವಣೆಯಲ್ಲಿ ಗೆದ್ದ ನಂತರ ಎಂಟು ಪಕ್ಷಗಳ ತಂಡ ಮಾಡಿಕೊಂಡು ಬಿಜೆಪಿಯಿಂದ ದೂರಾಯಿತು. ಬಹಳ ದಿನ ಅವರ ಮೈತ್ರಿ ಇರಲ್ಲ ಅನಿಸಿತ್ತು. ಈಗ ಅದು ಆಗಿದೆ. ಬೆಳವಣಿಗೆಗಳನ್ನು ಕಾದು ನೋಡುತ್ತೇವೆ. ’ ಎಂದು ಉತ್ತರಿಸಿದರು.</p>.<p>‘ಪ್ರಧಾನಿ ಮೋದಿ ಅವರು ಕರ್ನಾಟಕಕ್ಕೆ ಭೇಟಿ ನೀಡಿದ್ದನ್ನು ಚುನಾವಣಾ ಗಿಮಿಕ್ ಎಂದು ಸಿದ್ದರಾಮಯ್ಯ ಹೇಳಿದ್ದರೆ ಒಪ್ಪಲಾಗದು. ವಿರೋಧ ಪಕ್ಷದವರಾಗಿ ಟೀಕೆ ಮಾಡಬೇಕು ಎಂದು ಟೀಕೆ ಮಾಡಿದ್ದಾರೆ’ ಎಂದು ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>