ಲಾಕ್ಡೌನ್ ಸಡಲಿಕೆಯಾಗಿ =ದ್ದರೂ ಸಾಮೂಹಿಕ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿ ಬೆಟ್ಟಗೆರೆಯ ಮನೆಯೊಂದರಲ್ಲಿ ಸಾಮೂಹಿಕ ನಮಾಜ್ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದಿಲೀಪ್ ಕುಮಾರ್ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿದಾಗ ನಮಾಜ್ ಮಾಡುತ್ತಿದ್ದವರಲ್ಲಿ ಕೆಲವರು ಪರಾರಿಯಾಗಿದ್ದಾರೆ. 28 ಜನರನ್ನು ಬಂಧಿಸಿ ಅವರ ಮೇಲೆ ಮೊಕದ್ದಮ್ಮೆ ದಾಖಲಿಸಿದ್ದಾರೆ.