ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ 15 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ರಾಜು(38) ಅಲಿಯಾಸ್ ಗಣೇಶ್ ಹಾಗೂ ಜಯಕುಮಾರ್(30) ಅವರನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿಯನ್ನು ಕರೆದೊಯ್ದು ದೌರ್ಜನ್ಯ ಎಸಗಿರುವುದು, ಫೋನ್ ಮಾಡಿ ಪುಸಲಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.