ಕೆಲಸದ ಹಣ ಕೇಳಿದ್ದಕ್ಕೆ ಎನ್.ಆರ್.ಪುರ ತಾಲ್ಲೂಕು ಮೇಲ್ಪಾಲ್ನ ಕಾರ್ಮಿಕ ಸತೀಶ್ ಎಂಬುವರ ಮೇಲೆ ಆರೋಪಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೊಪ್ಪದ ಮಹೇಶ್, ಶಿರಿಲ್, ವಿಠಲ್, ಸುನಿಲ್ ಕಟ್ಟೆಹಕ್ಲು, ಮಂಜು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.