ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊಪ್ಪ | ಮರಕ್ಕೆ ಕಟ್ಟಿ ಹಲ್ಲೆ: ಆರೋಪಿಗಳ ಬಂಧನ

Published 8 ಫೆಬ್ರುವರಿ 2024, 16:32 IST
Last Updated 8 ಫೆಬ್ರುವರಿ 2024, 16:32 IST
ಅಕ್ಷರ ಗಾತ್ರ

ಕೊಪ್ಪ: ಸೋಮ್ಲಾಪುರ ಕಾಡಿನಲ್ಲಿ ಈಚೆಗೆ ವ್ಯಕ್ತಿ ಒಬ್ಬರನ್ನು ಮರಕ್ಕೆ ಕಟ್ಟಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕೆಲಸದ ಹಣ ಕೇಳಿದ್ದಕ್ಕೆ ಎನ್.ಆರ್.ಪುರ ತಾಲ್ಲೂಕು ಮೇಲ್ಪಾಲ್‌ನ ಕಾರ್ಮಿಕ ಸತೀಶ್ ಎಂಬುವರ ಮೇಲೆ ಆರೋಪಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೊಪ್ಪದ ಮಹೇಶ್, ಶಿರಿಲ್, ವಿಠಲ್, ಸುನಿಲ್ ಕಟ್ಟೆಹಕ್ಲು, ಮಂಜು ಎಂಬುವರ ವಿರುದ್ಧ ಪ್ರಕರಣ ದಾಖಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT