<p><strong>ಮೂಡಿಗೆರೆ</strong>: ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಚತುಷ್ಪಥ ಹೆದ್ದಾರಿಗಳು ದೇಶಕ್ಕೆ ಆರ್ಥಿಕ ಶಕ್ತಿ ನೀಡಿದವು’ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಹೇಳಿದರು.</p>.<p>ಪಟ್ಟಣದ ಬಿಜೆಪಿ ಕಚೇರಿ ಪಂಚವಟಿಯಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಟಲ್ ಬಿಹಾರಿ ವಾಜಪೇಯಿ ಅವರು ದಕ್ಷ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರು. ಅದರ ಪರಿಣಾಮವಾಗಿಯೇ ಕಾರ್ಗಿಲ್ ಯುದ್ಧದಲ್ಲಿ ಭಾರತವು ವಿಜಯೋತ್ಸವ ಆಚರಿಸುವಂತಾಯಿತು. ಪ್ರಮುಖ ನಗರಗಳನ್ನು ಸಂಪರ್ಕಿಸಲು ಅವರು ಹಾಕಿದ ಹೆದ್ದಾರಿ ಯೋಜನೆಯು ಆರ್ಥಿಕ ಪ್ರಗತಿಗೆ ಸಹಕಾರಿಯಾಯಿತು’ ಎಂದರು.</p>.<p>ಬಿಜೆಪಿ ಪದಾಧಿಕಾರಿಗಳಾದ ಪ್ರವೀಣ್ ಮಗ್ಗಲಮಕ್ಕಿ, ಪಂಚಕ್ಷರಿ ಹಾಲೂರು, ಕೋಡದಿಣ್ಣೆ ಧನಿಕ್, ಪ್ರಶಾಂತ್ ಬಿಳಗುಳ, ಕಾಮಾಕ್ಷಿ, ಪ್ರವೀಣ್, ಪದ್ಮನಾಭ, ರವಿಒಡೆಯರ್, ರಂಗನಾಥ್, ಮಂಜುನಾಥ್ ಪಟೇಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಚತುಷ್ಪಥ ಹೆದ್ದಾರಿಗಳು ದೇಶಕ್ಕೆ ಆರ್ಥಿಕ ಶಕ್ತಿ ನೀಡಿದವು’ ಎಂದು ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಹೇಳಿದರು.</p>.<p>ಪಟ್ಟಣದ ಬಿಜೆಪಿ ಕಚೇರಿ ಪಂಚವಟಿಯಲ್ಲಿ ಏರ್ಪಡಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯಲ್ಲಿ ಅವರು ಮಾತನಾಡಿದರು.</p>.<p>‘ಅಟಲ್ ಬಿಹಾರಿ ವಾಜಪೇಯಿ ಅವರು ದಕ್ಷ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದರು. ಅದರ ಪರಿಣಾಮವಾಗಿಯೇ ಕಾರ್ಗಿಲ್ ಯುದ್ಧದಲ್ಲಿ ಭಾರತವು ವಿಜಯೋತ್ಸವ ಆಚರಿಸುವಂತಾಯಿತು. ಪ್ರಮುಖ ನಗರಗಳನ್ನು ಸಂಪರ್ಕಿಸಲು ಅವರು ಹಾಕಿದ ಹೆದ್ದಾರಿ ಯೋಜನೆಯು ಆರ್ಥಿಕ ಪ್ರಗತಿಗೆ ಸಹಕಾರಿಯಾಯಿತು’ ಎಂದರು.</p>.<p>ಬಿಜೆಪಿ ಪದಾಧಿಕಾರಿಗಳಾದ ಪ್ರವೀಣ್ ಮಗ್ಗಲಮಕ್ಕಿ, ಪಂಚಕ್ಷರಿ ಹಾಲೂರು, ಕೋಡದಿಣ್ಣೆ ಧನಿಕ್, ಪ್ರಶಾಂತ್ ಬಿಳಗುಳ, ಕಾಮಾಕ್ಷಿ, ಪ್ರವೀಣ್, ಪದ್ಮನಾಭ, ರವಿಒಡೆಯರ್, ರಂಗನಾಥ್, ಮಂಜುನಾಥ್ ಪಟೇಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>