ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವವರು ಗುರುತಿನ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಒಂದು ಸಾವಿರ ರೂ ಠೇವಣಿ ಮಾಡಿ ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ಹರಾಜಿನಲ್ಲಿ ಹೆಚ್ಚಿನ ಮೊತ್ತಕ್ಕೆ ಕೂಗಿದವರು ಸ್ಥಳದಲ್ಲೇ ಮೊತ್ತದ ಹಣವನ್ನು ಪಾವತಿಸಿ ವಾಹನವನ್ನು ವಶಕ್ಕೆ ಪಡೆದುಕೊಳ್ಳಬೇಕು. ಉಪವಿಭಾಗದ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಹರಾಜು ಪ್ರಕ್ರಿಯೆಯ ಉಸ್ತುವಾರಿ ಅಧಿಕಾರಿಯಾಗಿದ್ದು, ಅವರ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.