<p><strong>ಚಿಕ್ಕಮಗಳೂರು</strong>: ‘ದೇಶದ ಪಾರಂಪರಿಕ ಚಿಕಿತ್ಸಾ ಪದ್ಧತಿಯಾದ ಆಯುರ್ವೇದ ನಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಆರೋಗ್ಯವಂತರನ್ನಾಗಿ ಮಾಡುತ್ತದೆ. ಆಯುರ್ವೇದದ ಮೂಲಕ ಪ್ರಕೃತಿಗೆ ಹೊಂದಿಕೊಂಡು ಬದುಕುವ ಜೀವನ ಶೈಲಿಯನ್ನು ನಾವು ಮತ್ತೆ ಅಭ್ಯಾಸ ಮಾಡಿಕೊಳ್ಳಬಹುದು. ಈ ಸೃಷ್ಟಿಯ ಭಾಗವಾದ ನಾವು ಅದಕ್ಕೆ ಪೂರಕವಾಗಿ ಬದುಕುವುದು ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>ಬುಧವಾರ ನಗರದ ರಾಮಕೃಷ್ಣ ನರ್ಸಿಂಗ್ ಕಾಲೇಜಿನಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ’ ಎಂಬ ಘೋಷ ವಾಕ್ಯದೊಂದಿಗೆ ನಡೆದ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ವಾತ, ಪಿತ್ತ, ಕಫ ಈ ಮೂರು ಸಮಚಿತ್ತದಲ್ಲಿದ್ದರೆ ಅವನು ಆರೋಗ್ಯವಂತ. ಯಾವ ಸ್ಟೆತಸ್ಕೋಪ್, ಥರ್ಮಾಮೀಟರ್ ಇಡಬೇಕಾಗಿಲ್ಲ. ಇದರಲ್ಲಿ ವ್ಯತ್ಯಾಸ ಕಂಡರೆ ಆಹಾರದಲ್ಲಿ ಸರಿಪಡಿಸಿಕೊಂಡರೆ ಸಾಕು ಆರೋಗ್ಯ ಸರಿಯಾಗುತ್ತದೆ. ಹೀಗಾಗಿ ಪಾರಂಪರಿಕ ಚಿಕಿತ್ಸಾ ಪದ್ಧತಿಯ ಬಗ್ಗೆ ಜನರಿಗೆ ಅರಿವು ಮೂಡಿಸಿ ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>‘ನೈಸರ್ಗಿಕ ಮತ್ತು ಶುದ್ಧ ಆಯುರ್ವೇದದ ಮೂಲಕವೇ ಆರೋಗ್ಯವನ್ನು ನಾನು ಸಮತೋಲನದಲ್ಲಿ ಇಟ್ಟುಕೊಂಡಿದ್ದೇನೆ’ ಎಂದರು. ಇದೇ ವೇಳೆ ಆಯುರ್ವೇದ ದಿನಾಚರಣೆಯ ಸ್ಮರಣಾರ್ಥ ವೃಕ್ಷಾರೋಹಣಾ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ‘ದೇಶದ ಪಾರಂಪರಿಕ ಚಿಕಿತ್ಸಾ ಪದ್ಧತಿಯಾದ ಆಯುರ್ವೇದ ನಮ್ಮನ್ನು ದೈಹಿಕವಾಗಿ, ಮಾನಸಿಕವಾಗಿ ಮತ್ತು ಆರೋಗ್ಯವಂತರನ್ನಾಗಿ ಮಾಡುತ್ತದೆ. ಆಯುರ್ವೇದದ ಮೂಲಕ ಪ್ರಕೃತಿಗೆ ಹೊಂದಿಕೊಂಡು ಬದುಕುವ ಜೀವನ ಶೈಲಿಯನ್ನು ನಾವು ಮತ್ತೆ ಅಭ್ಯಾಸ ಮಾಡಿಕೊಳ್ಳಬಹುದು. ಈ ಸೃಷ್ಟಿಯ ಭಾಗವಾದ ನಾವು ಅದಕ್ಕೆ ಪೂರಕವಾಗಿ ಬದುಕುವುದು ಅವಶ್ಯ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.</p>.<p>ಬುಧವಾರ ನಗರದ ರಾಮಕೃಷ್ಣ ನರ್ಸಿಂಗ್ ಕಾಲೇಜಿನಲ್ಲಿ 10ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ‘ಜನರಿಗಾಗಿ ಮತ್ತು ಜಗತ್ತಿಗಾಗಿ ಆಯುರ್ವೇದ’ ಎಂಬ ಘೋಷ ವಾಕ್ಯದೊಂದಿಗೆ ನಡೆದ ಆಯುರ್ವೇದ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ವಾತ, ಪಿತ್ತ, ಕಫ ಈ ಮೂರು ಸಮಚಿತ್ತದಲ್ಲಿದ್ದರೆ ಅವನು ಆರೋಗ್ಯವಂತ. ಯಾವ ಸ್ಟೆತಸ್ಕೋಪ್, ಥರ್ಮಾಮೀಟರ್ ಇಡಬೇಕಾಗಿಲ್ಲ. ಇದರಲ್ಲಿ ವ್ಯತ್ಯಾಸ ಕಂಡರೆ ಆಹಾರದಲ್ಲಿ ಸರಿಪಡಿಸಿಕೊಂಡರೆ ಸಾಕು ಆರೋಗ್ಯ ಸರಿಯಾಗುತ್ತದೆ. ಹೀಗಾಗಿ ಪಾರಂಪರಿಕ ಚಿಕಿತ್ಸಾ ಪದ್ಧತಿಯ ಬಗ್ಗೆ ಜನರಿಗೆ ಅರಿವು ಮೂಡಿಸಿ ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು.</p>.<p>‘ನೈಸರ್ಗಿಕ ಮತ್ತು ಶುದ್ಧ ಆಯುರ್ವೇದದ ಮೂಲಕವೇ ಆರೋಗ್ಯವನ್ನು ನಾನು ಸಮತೋಲನದಲ್ಲಿ ಇಟ್ಟುಕೊಂಡಿದ್ದೇನೆ’ ಎಂದರು. ಇದೇ ವೇಳೆ ಆಯುರ್ವೇದ ದಿನಾಚರಣೆಯ ಸ್ಮರಣಾರ್ಥ ವೃಕ್ಷಾರೋಹಣಾ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>