<p><strong>ಚಿಕ್ಕಮಗಳೂರು</strong>: ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ₹5 ಕೋಟಿ ಒದಗಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.</p>.<p>ಸಖರಾಯಪಟ್ಟಣ ಸಮೀಪದ ಅಯ್ಯನಕೆರೆಗೆ ಬಾಗಿನ ಅರ್ಪಿಸಿದ ಮಾತನಾಡಿದ ಅವರು, ‘ಮಳೆಗಾಲ ಮುಗಿದ ಕೂಡಲೇ ಏರಿ ಸೌಂದರ್ಯ ಹೆಚ್ಚಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೆ ಮಾಡಲಾಗುವುದು’ ಎಂದರು.</p>.<p>ಸುಮಾರು ಐದು ಸಾವಿರಕ್ಕೂ ಹೆಚ್ಚು ಹೆಕ್ಷ್ಟೇರ್ ಅಚ್ಚುಕಟ್ಟು ಪ್ರದೇಶದ ರೈತರಿದ್ದಾರೆ. ಇಲ್ಲಿ ಬಲ್ಲಾಳೇಶ್ವರ ದೇವಸ್ಥಾನವಿದೆ. ದೇವರ ಅನುಗ್ರಹ ಹಾಗೂ ಅಚ್ಚುಕಟ್ಟುದಾರರ ಸಹಕಾರದೊಂದಿಗೆ ಕೆರೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವೂ ಬಾಗಿನ ಅರ್ಪಸಲಾಗಿದೆ. ಹಿರಿಯರು ಅಂದು ಸ್ಥಾಪನೆ ಮಾಡಿರುವ ಕೆರೆಗೆ ಪ್ರಕೃತಿಯೇ ಹೆಚ್ಚು ಸಹಾಯ ಮಾಡಿದೆ. ಇಂತಹ ನೈಸರ್ಗಿಕ ಮೂಲ ಹೊಂದಿದ ಕೆರೆ ಇದಾಗಿದೆ. ರೈತರು ಈ ಕೆರೆಯ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದರು.</p>.<p>ಬಸವ ತತ್ವ ಪೀಠದ ಪೀಠಾಧ್ಯಕ್ಷ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ‘ನಿರ್ವಾಣ ಸ್ವಾಮಿಗಳ ಆಶೀರ್ವಾದದಿಂದ ಅಯ್ಯನಕೆರೆ ಕೆರೆ ನಿರ್ಮಾಣವಾಗಿದೆ. ಈ ಕಟ್ಟೆ ಒಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಜೀವ ಪಣಕಿಟ್ಟು ಕೆರೆಯನ್ನು ಉಳಿಸಿದ್ದಾರೆ. ಇದರಿಂದಾಗಿ ಈ ಭಾಗದ ಎಲ್ಲಾ ಜನರ ಜೀವನಾಡಿಯಾಗಿದೆ’ ಎಂದರು.</p>.<p>ಹುಲಿಕೆರೆ ವೀರಪ್ಪಲಿಂಗ ಸ್ವಾಮೀಜಿ, ಕಡೂರಿನ ಜ್ಞಾನಪ್ರಭ ಸಿದ್ಧರಾಮ ದೇಶೀಕೇಂದ್ರ ಸ್ವಾಮೀಜಿ, ಶಿವಯೋಗಿ ಶಂಕರ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಮಂಗಳಾ ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್ ಮುಖಂಡರಾದ ಮಹಡಿ ಮನೆ ಸತೀಶ್, ಎಚ್.ಪಿ.ಮಂಜೇಗೌಡ, ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಅಯ್ಯನಕೆರೆಯಲ್ಲಿ ತೂಬು ಮತ್ತು ಕೆರೆ ದುರಸ್ತಿಗೆ ₹5 ಕೋಟಿ ಒದಗಿಸಲಾಗಿದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.</p>.<p>ಸಖರಾಯಪಟ್ಟಣ ಸಮೀಪದ ಅಯ್ಯನಕೆರೆಗೆ ಬಾಗಿನ ಅರ್ಪಿಸಿದ ಮಾತನಾಡಿದ ಅವರು, ‘ಮಳೆಗಾಲ ಮುಗಿದ ಕೂಡಲೇ ಏರಿ ಸೌಂದರ್ಯ ಹೆಚ್ಚಿಸಿ ಪ್ರವಾಸಿಗರನ್ನು ಹೆಚ್ಚು ಆಕರ್ಷಣೆ ಮಾಡಲಾಗುವುದು’ ಎಂದರು.</p>.<p>ಸುಮಾರು ಐದು ಸಾವಿರಕ್ಕೂ ಹೆಚ್ಚು ಹೆಕ್ಷ್ಟೇರ್ ಅಚ್ಚುಕಟ್ಟು ಪ್ರದೇಶದ ರೈತರಿದ್ದಾರೆ. ಇಲ್ಲಿ ಬಲ್ಲಾಳೇಶ್ವರ ದೇವಸ್ಥಾನವಿದೆ. ದೇವರ ಅನುಗ್ರಹ ಹಾಗೂ ಅಚ್ಚುಕಟ್ಟುದಾರರ ಸಹಕಾರದೊಂದಿಗೆ ಕೆರೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೆಗೌಡ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವೂ ಬಾಗಿನ ಅರ್ಪಸಲಾಗಿದೆ. ಹಿರಿಯರು ಅಂದು ಸ್ಥಾಪನೆ ಮಾಡಿರುವ ಕೆರೆಗೆ ಪ್ರಕೃತಿಯೇ ಹೆಚ್ಚು ಸಹಾಯ ಮಾಡಿದೆ. ಇಂತಹ ನೈಸರ್ಗಿಕ ಮೂಲ ಹೊಂದಿದ ಕೆರೆ ಇದಾಗಿದೆ. ರೈತರು ಈ ಕೆರೆಯ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದರು.</p>.<p>ಬಸವ ತತ್ವ ಪೀಠದ ಪೀಠಾಧ್ಯಕ್ಷ ಬಸವ ಮರುಳಸಿದ್ಧ ಸ್ವಾಮೀಜಿ ಮಾತನಾಡಿ, ‘ನಿರ್ವಾಣ ಸ್ವಾಮಿಗಳ ಆಶೀರ್ವಾದದಿಂದ ಅಯ್ಯನಕೆರೆ ಕೆರೆ ನಿರ್ಮಾಣವಾಗಿದೆ. ಈ ಕಟ್ಟೆ ಒಡೆಯುತ್ತಿರುವ ಸಂದರ್ಭದಲ್ಲಿ ತಮ್ಮ ಜೀವ ಪಣಕಿಟ್ಟು ಕೆರೆಯನ್ನು ಉಳಿಸಿದ್ದಾರೆ. ಇದರಿಂದಾಗಿ ಈ ಭಾಗದ ಎಲ್ಲಾ ಜನರ ಜೀವನಾಡಿಯಾಗಿದೆ’ ಎಂದರು.</p>.<p>ಹುಲಿಕೆರೆ ವೀರಪ್ಪಲಿಂಗ ಸ್ವಾಮೀಜಿ, ಕಡೂರಿನ ಜ್ಞಾನಪ್ರಭ ಸಿದ್ಧರಾಮ ದೇಶೀಕೇಂದ್ರ ಸ್ವಾಮೀಜಿ, ಶಿವಯೋಗಿ ಶಂಕರ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಾಜಮ್ಮ, ಮಂಗಳಾ ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್ ಮುಖಂಡರಾದ ಮಹಡಿ ಮನೆ ಸತೀಶ್, ಎಚ್.ಪಿ.ಮಂಜೇಗೌಡ, ಪ್ರವೀಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>