ಕಾಮಗಾರಿ ಆರಂಭಿಸಲು ಬೇಕಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನೂ ಸಣ್ಣ ನೀರಾವರಿ ಇಲಾಖೆ ಪೂರ್ಣಗೊಳಿಸಿದೆ. ₹9.90 ಕೋಟಿ ಮೊತ್ತದ ಯೋಜನೆಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಮಗಾರಿ ಆರಂಭಿಸಲು ಗುತ್ತಿಗೆದಾರರಿಗೆ ಕಾರ್ಯಾದೇಶವನ್ನೂ ನೀಡಲಾಗಿದೆ. ಆದರೆ, ರಾಜ್ಯ ಸರ್ಕಾರ ಹೊಸ ಕಾಮಗಾರಿಗಳನ್ನು ಆರಂಭಿಸಲು ಇನ್ನೂ ಅನುಮತಿ ನೀಡಿಲ್ಲ. ಅನುಮತಿ ನೀಡಿದ ಕೂಡಲೇ ಕಾಮಗಾರಿ ಆರಂಭವಾಗಲಿದೆ. ಕಾರ್ಯಾದೇಶ ದೊರೆತಿದ್ದು ಕಾಮಗಾರಿ ಆರಂಭಿಸಲು ಗುತ್ತಿಗೆದಾರರು ಸರ್ಕಾರದ ಹಸಿರು ನಿಶಾನೆಗೆ ಕಾದಿದ್ದಾರೆ. ಕಾಮಗಾರಿ ಆರಂಭಗೊಂಡು ನಿಗದಿತ ವೇಳೆಯಲ್ಲೇ ಪೂರ್ಣಗೊಂಡರೆ ಕೆಲವೇ ವರ್ಷಗಳಲ್ಲಿ ಹುಲಿಕೆರೆಯ ಬಿರಟಿಕೆರೆಗೆ ಅಯ್ಯನಕೆರೆ ನೀರು ಸೇರಲಿದೆ.