ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದಿದ್ದ ಸಮಾರಂಭದಲ್ಲಿ ಸಿ.ವಿ. ರಾಮನ್ ನಗರ ಕ್ಷೇತ್ರದ ಟಿಕೆಟ್ ಅನ್ನು ಲೋಕೋಪಯೋಗಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರಿಗೆ ನೀಡುವುದಾಗಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ ಎಂದು ಪಕ್ಷದ ಕೆಲವು ರಾಜ್ಯ ಮುಖಂಡರು ವರಿಷ್ಠರಿಗೆ ದೂರು ಸಲ್ಲಿಸಿದ್ದು, ಟಿ.ನರಸೀಪುರ ಕ್ಷೇತ್ರವನ್ನು ತಮ್ಮ ಪುತ್ರನಿಗೆ ಬಿಟ್ಟುಕೊಡುವ ಇರಾದೆಯೊಂದಿಗೇ ಮಹದೇವಪ್ಪ ಅವರು ಕ್ಷೇತ್ರ ಬದಲಿಸುವ ಆಲೋಚನೆ ಹೊಂದಿದ್ದಾರೆ. ಅದಕ್ಕೆ ಪ್ರೋತ್ಸಾಹ ನೀಡುವುದು ಎಷ್ಟು ಸೂಕ್ತ ಎಂದು ಪ್ರಶ್ನಿಸಿದ್ದಾರೆ.