<p><strong>ಮೂಡಿಗೆರೆ:</strong> ಪಟ್ಟಣದ ಕೆ.ಎಂ.ರಸ್ತೆಯಲ್ಲಿರುವ ಹಿರೇದೇವಿರಮ್ಮನ ಬನದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಎರಡು ದಿನಗಳ ಕಾಲ ನಡೆದ ವಾರ್ಷಿಕ ದೀಪೋತ್ಸವ ಶನಿವಾರ ಸಂಪನ್ನಗೊಂಡಿತು.</p>.<p>ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಅಯ್ಯಪ್ಪಸ್ವಾಮಿ, ಗಣಪತಿ, ಸುಬ್ರಹ್ಮಣ್ಯ ಸ್ವಾಮಿ, ಕಾಲಭೈರವೇಶ್ವರ ಹಾಗೂ ಹಿರೇದೇವಿರಮ್ಮನಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು ಹಾಗೂ ದೇವಸ್ಥಾನದಲ್ಲಿ ಗಣಪತಿ ಹೋಮ, ಚಂಡಿಕಾ ಹೋಮ ನಡೆದವು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಸಂಜೆ ಪಾಲಕೊಂಬಿನೊಂದಿಗೆ ನೂರಾರು ಅಯಪ್ಪಸ್ವಾಮಿ ಮಾಲಾಧಾರಿಗಳು ಹಳೇಮೂಡಿಗೆರೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಚಂಡೆ ವಾದ್ಯಗಳೊಂದಿಗೆ ದೀಪೋತ್ಸವ ಮೆರವಣಿಗೆ ನಡೆಸಲಾಯಿತು.</p>.<p>ರಾತ್ರಿ ಅಯ್ಯಪ್ಪಸ್ವಾಮಿಗೆ ಶ್ರೀರಂಗಪೂಜೆ ನಡೆಸಿ, ಬಳಿಕ ದೀಪೋತ್ಸವದ ಮಹಾಪೂಜೆ ಆದ ನಂತರ ಅನ್ನಸಂತರ್ಪಣೆ ಮಾಡಲಾಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು, ವಿವಿಧೆಡೆಯಿಂದ ಬಂದಿದ್ದ ಭಕ್ತರು ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ:</strong> ಪಟ್ಟಣದ ಕೆ.ಎಂ.ರಸ್ತೆಯಲ್ಲಿರುವ ಹಿರೇದೇವಿರಮ್ಮನ ಬನದ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಎರಡು ದಿನಗಳ ಕಾಲ ನಡೆದ ವಾರ್ಷಿಕ ದೀಪೋತ್ಸವ ಶನಿವಾರ ಸಂಪನ್ನಗೊಂಡಿತು.</p>.<p>ದೀಪೋತ್ಸವದ ಅಂಗವಾಗಿ ಬೆಳಿಗ್ಗೆ ಅಯ್ಯಪ್ಪಸ್ವಾಮಿ, ಗಣಪತಿ, ಸುಬ್ರಹ್ಮಣ್ಯ ಸ್ವಾಮಿ, ಕಾಲಭೈರವೇಶ್ವರ ಹಾಗೂ ಹಿರೇದೇವಿರಮ್ಮನಿಗೆ ಪಂಚಾಮೃತ ಅಭಿಷೇಕ ಮಾಡಲಾಯಿತು ಹಾಗೂ ದೇವಸ್ಥಾನದಲ್ಲಿ ಗಣಪತಿ ಹೋಮ, ಚಂಡಿಕಾ ಹೋಮ ನಡೆದವು. ಮಧ್ಯಾಹ್ನ ಸಾಮೂಹಿಕ ಅನ್ನಸಂತರ್ಪಣೆ ಮಾಡಲಾಯಿತು.</p>.<p>ಸಂಜೆ ಪಾಲಕೊಂಬಿನೊಂದಿಗೆ ನೂರಾರು ಅಯಪ್ಪಸ್ವಾಮಿ ಮಾಲಾಧಾರಿಗಳು ಹಳೇಮೂಡಿಗೆರೆ ಗಣಪತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ಚಂಡೆ ವಾದ್ಯಗಳೊಂದಿಗೆ ದೀಪೋತ್ಸವ ಮೆರವಣಿಗೆ ನಡೆಸಲಾಯಿತು.</p>.<p>ರಾತ್ರಿ ಅಯ್ಯಪ್ಪಸ್ವಾಮಿಗೆ ಶ್ರೀರಂಗಪೂಜೆ ನಡೆಸಿ, ಬಳಿಕ ದೀಪೋತ್ಸವದ ಮಹಾಪೂಜೆ ಆದ ನಂತರ ಅನ್ನಸಂತರ್ಪಣೆ ಮಾಡಲಾಯಿತು. ದೇವಾಲಯ ಸಮಿತಿ ಪದಾಧಿಕಾರಿಗಳು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು, ವಿವಿಧೆಡೆಯಿಂದ ಬಂದಿದ್ದ ಭಕ್ತರು ದೀಪೋತ್ಸವದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>