ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ‘ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಕಾಂಗ್ರೆಸ್ ಸಂಭ್ರಮದಿಂದ ಆಚರಿಸುತ್ತಿದೆ. ದೇಶಕ್ಕಾಗಿ ಕಾಂಗ್ರೆಸ್ ನೀಡಿದ ಕೊಡುಗೆಗಳನ್ನೂ ನೆನಪಿಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರ ದೇಶದಾದ್ಯಂತ ಉಚಿತ ಶಿಕ್ಷಣ, ಮಧ್ಯಾಹ್ನದ ಬಿಸಿಯೂಟ, ವಯಸ್ಕರ ಶಿಕ್ಷಣ ಮೂಲಕ ಅಪಾರವಾದ ಬದಲಾವಣೆ ಮಾಡಿದೆ. ನೀರು, ಮನೆ, ರಸ್ತೆ, ವಿದ್ಯುತ್, ಆರೋಗ್ಯ, ಶುಚಿತ್ವ, ಆಹಾರ ಭದ್ರತಾ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ ಎಂದರು.