ಬ್ರಿಜೇಶ್ ಶರ್ಮಾ ಅವರು ಸಾವಯವ ಕೃಷಿಯ ಮಹತ್ವ ಹೇಳುತ್ತಾ ಸೈಕಲ್ ಯಾತ್ರೆ ಮಾಡುತ್ತಿದ್ದಾರೆ. ಶಾಲೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ನಿಷೇಧ, ಪರಿಸರ ರಕ್ಷಣೆಯ ಕುರಿತು ಮಾಹಿತಿ ನೀಡುತ್ತಿದ್ದಾರೆ. ಗುಜರಾತ್, ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಂಚರಿಸಿ ಕರ್ನಾಟಕಕ್ಕೆ ಬಂದ ಅವರು, ಮುಂದೆ ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಪ್ರಯಾಣ ನಡೆಸಲಿದ್ದಾರೆ.