ಚಿಕ್ಕಮಗಳೂರು: ‘ಶ್ರೀಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಂಪುಟ ಉಪಸಮಿತಿ ನೇಮಿಸಿದ್ದು, ಅಧಿಕಾರಿಗಳೊಂದಿಗೆ ಪ್ರಾಥಮಿಕ ಸಭೆ ನಡೆಸಲಾಗಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಸಮಿತಿಯ ಅಧ್ಯಕ್ಷ ಇದ್ದೇನೆ. ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್. ಅಂಗಾರ ಸಮಿತಿಯಲ್ಲಿ ಇದ್ದಾರೆ’ ಎಂದರು.