ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಸಮಿತಿ ಅಧ್ಯಕ್ಷ ಹಾಜಿ ಯೂಸೆಫ್, ಉಪಾಧ್ಯಕ್ಷ ಹಾಜಿ ಯೂಸೆಫ್, ಕಾರ್ಯದರ್ಶಿ ಸಯ್ಯದ್ ಮುಗ್ದುಮ್ ಪಾಷಾ, ‘ಶ್ರೀಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾವನ್ನು ಸಂಪೂರ್ಣ ಹಿಂದೂ ಧಾರ್ಮಿಕ ಕ್ಷೇತ್ರವಾಗಬೇಕು. ಗೋರಿಗಳನ್ನು ಸ್ಥಳಾಂತರ ಮಾಡಬೇಕು. ಸರ್ಕಾರ ಈ ಕೆಲಸ ಮಾಡದಿದ್ದರೆ ಶ್ರೀರಾಮ ಸೇನೆಯಿಂದಲೇ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಸ್ಥಳ ಎರಡೂ ಸಮುದಾಯಕ್ಕೆ ಸೇರಿದ್ದು ಎಂದು ಕೋರ್ಟ್ ಹೇಳಿದ್ದರೂ ಸಮಾಜದಲ್ಲಿ ಹುಳಿ ಹಿಂಡುವ, ಶಾಂತಿ ಕದಡುವ ಕೆಲಸ ಮಾಡಲಾಗುತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.