<p><strong>ಚಿಕ್ಕಮಗಳೂರು:</strong> ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದ್–ಉಲ್ ಅಝಾಹ್(ಬಕ್ರೀದ್) ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಶನಿವಾರ ಆಚರಿಸಲಾಯಿತು.</p>.<p>ಶ್ವೇತವಸ್ತ್ರ ತೊಟ್ಟು ಮಸೀದಿ, ಈದ್ಗಾ ಮೈದಾನಗಳಿಗೆ ತಂಡೋಪ ತಂಡವಾಗಿ ಬಂದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೌಲ್ವಿಗಳು ಸಂದೇಶ ಮತ್ತು ಪ್ರವಚನ ನೀಡಿದರು.</p>.<p>ಪ್ರಾರ್ಥನೆ ಮುಗಿಸಿದ ನಂತರ ಖಬರಸ್ತಾನಕ್ಕೆ ತೆರಳಿ, ಗೋರಿಗಳಿಗೆ ಹೂ ಸಮರ್ಪಿಸಿದರು. ಹಿರಿಯರನ್ನು ಸ್ಮರಿಸಿದರು. ತಪ್ಪುಗಳನ್ನು ಕ್ಷಮಿಸಿ, ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಮುಗಿಸಿದ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಹಂಚಿಕೊಂಡರು.</p>.<p>‘ಬಡವರು, ನೆರೆಹೊರೆಯವರು, ಸಂಬಂಧಿಕರಿಗೆ ಕುರಬಾನಿ ಹಂಚುವುದು ಈ ಹಬ್ಬದ ವಿಶೇಷ. ಬಿರಿಯಾನಿ, ಪಾಯಸ, ಜಾಮೂನು, ಹಣ್ಣುಗಳಿಂದ ತಯಾರಿಸಿದ ಕಸ್ಟಡ್, ಶಾವಿಗೆ ಸೇರಿ ಬಗೆ ಬಗೆಯ ಖಾದ್ಯ ಸಿದ್ಧಪಡಿಸಿಕೊಂಡು ಸವಿಯುವುದು ಎಲ್ಲರ ಮನೆಯಲ್ಲೂ ಸಾಮಾನ್ಯ’ ಎಂದು ಗೌರಿಕಾಲುವೆ ಬಡಾವಣೆಯ ಸೈಯದ್ ಹೇಳಿದರು.</p>.<p>ಮಸೀದಿ ರಸ್ತೆಗಳಲ್ಲಿ ವಾಹನ, ಜನ ದಟ್ಟಣೆ ಇತ್ತು. ನಗರದ ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತ್ಯಾಗ, ಬಲಿದಾನ ಹಾಗೂ ಭ್ರಾತೃತ್ವದ ಸಂಕೇತವಾದ ಈದ್–ಉಲ್ ಅಝಾಹ್(ಬಕ್ರೀದ್) ಹಬ್ಬವನ್ನು ಜಿಲ್ಲೆಯಾದ್ಯಂತ ಶ್ರದ್ಧಾ ಭಕ್ತಿಯಿಂದ ಶನಿವಾರ ಆಚರಿಸಲಾಯಿತು.</p>.<p>ಶ್ವೇತವಸ್ತ್ರ ತೊಟ್ಟು ಮಸೀದಿ, ಈದ್ಗಾ ಮೈದಾನಗಳಿಗೆ ತಂಡೋಪ ತಂಡವಾಗಿ ಬಂದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮೌಲ್ವಿಗಳು ಸಂದೇಶ ಮತ್ತು ಪ್ರವಚನ ನೀಡಿದರು.</p>.<p>ಪ್ರಾರ್ಥನೆ ಮುಗಿಸಿದ ನಂತರ ಖಬರಸ್ತಾನಕ್ಕೆ ತೆರಳಿ, ಗೋರಿಗಳಿಗೆ ಹೂ ಸಮರ್ಪಿಸಿದರು. ಹಿರಿಯರನ್ನು ಸ್ಮರಿಸಿದರು. ತಪ್ಪುಗಳನ್ನು ಕ್ಷಮಿಸಿ, ಒಳಿತು ಮಾಡುವಂತೆ ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ ಮುಗಿಸಿದ ಬಳಿಕ ಪರಸ್ಪರ ಆಲಂಗಿಸಿ ಶುಭಾಶಯ ಹಂಚಿಕೊಂಡರು.</p>.<p>‘ಬಡವರು, ನೆರೆಹೊರೆಯವರು, ಸಂಬಂಧಿಕರಿಗೆ ಕುರಬಾನಿ ಹಂಚುವುದು ಈ ಹಬ್ಬದ ವಿಶೇಷ. ಬಿರಿಯಾನಿ, ಪಾಯಸ, ಜಾಮೂನು, ಹಣ್ಣುಗಳಿಂದ ತಯಾರಿಸಿದ ಕಸ್ಟಡ್, ಶಾವಿಗೆ ಸೇರಿ ಬಗೆ ಬಗೆಯ ಖಾದ್ಯ ಸಿದ್ಧಪಡಿಸಿಕೊಂಡು ಸವಿಯುವುದು ಎಲ್ಲರ ಮನೆಯಲ್ಲೂ ಸಾಮಾನ್ಯ’ ಎಂದು ಗೌರಿಕಾಲುವೆ ಬಡಾವಣೆಯ ಸೈಯದ್ ಹೇಳಿದರು.</p>.<p>ಮಸೀದಿ ರಸ್ತೆಗಳಲ್ಲಿ ವಾಹನ, ಜನ ದಟ್ಟಣೆ ಇತ್ತು. ನಗರದ ಪ್ರಮುಖ ವೃತ್ತಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>