ಖಾಂಡ್ಯ ಪ್ಲಾಂಟರ್ಸ್ ಕ್ಲಬ್ನಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸರಾಸರಿ 60ರಿಂದ 70 ಇಂಚು ಮಳೆಯಾಗುತ್ತಿದ್ದ ಈ ಭಾಗದಲ್ಲಿ ಈ ಬಾರಿ ವಾಡಿಕೆಗಿಂತ ಗರಿಷ್ಠ 100ರಿಂದ 120 ಇಂಚು ಮಳೆಯಾಗಿದೆ. ಇದರಿಂದಾಗಿ ಕಾಫಿ, ಅಡಿಕೆ, ಕಾಳುಮೆಣಸು, ಭತ್ತ ಮುಂತಾದ ಬೆಳೆಗಳಿಗೆ ಶೇ 40ರಷ್ಟು ಹಾನಿಯಾಗಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಖಾಂಡ್ಯ ಹೋಬಳಿಯ ಕೆಲವು ಗ್ರಾಮಗಳಲ್ಲಿ ದಿನಕ್ಕೆ 5ರಿಂದ 6 ಇಂಚು ಮಳೆ ಸುರಿದು ಜಮೀನು, ಬೆಳೆಗಳು ಕೊಚ್ಚಿ ಹೋಗಿ, ರಸ್ತೆಗಳಿಗೆ ಹಾನಿಯಾಗಿದೆ. ಬೆಳೆ ಹಾನಿಯಾದ ಕಾರಣ ಬ್ಯಾಂಕ್ಗಳಲ್ಲಿ ಸಾಲ ಪಡೆದು ಕೃಷಿ ಮಾಡುತ್ತಿರುವ ರೈತರಿಗೆ ಸಾಲ ತೀರಿಸಿ, ಜೀವನ ಸಾಗಿಸುವುದು ಕಷ್ಟಸಾಧ್ಯವಾಗಿದೆ. ಹೋಬಳಿಯಾದ್ಯಂತ ಆಗಿರುವ ಮಳೆಹಾನಿ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ರೈತರಿಗೆ ಅನುಕೂಲ ಮಾಡಿಕೊಡುವಂತೆ ಮನವಿಯಲ್ಲಿ ವಿನಂತಿಸಲಾಗಿದೆ.