<p>ಬಾಳೆಹೊನ್ನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಮತ್ತು ಮಹಾದ್ವಾರ ಲೋಕಾರ್ಪಣೆ ಶನಿವಾರ ಮತ್ತು ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.</p>.<p>ರಾಜಗೋಪುರ ಉದ್ಘಾಟನೆ ಅಂಗವಾಗಿ ಶನಿವಾರ ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕ ಪೂಜೆ, ರಾಕ್ಷೋಘ್ನ ಶಾಂತಿ, ನವಗ್ರಹ ಶಾಂತಿ, ವಾಸ್ತು ಶಾಂತಿ, ಅಧಿವಾಸ, ಪವಮಾನ, ವಾಯುಸ್ತುತಿ, ದಿಕ್ಪಾಲ ಬಲಿ ಪ್ರಧಾನ, ಕಲಶ ಪ್ರತಿಷ್ಠೆ ಹಾಗೂ ಪಾರಾಯಣ ನಡೆಯಿತು.</p>.<p>ಭಾನುವಾರ ಬೆಳಿಗ್ಗೆ ಪ್ರತಿಷ್ಠಾಂಗ ಹೋಮ, ರಾಮನಾಮ ತಾರಕ ಹೋಮ, ಪವಮಾನ, ವಾಯುಸ್ತುತಿ, ಕಲಶಾಭಿಷೇಕ, ಮಹಾಪೂಜೆ ನಡೆಯಿತು. ಸಂಜೆ ಶೃಂಗೇರಿಯ ಹೆಬ್ಬಾಗಿಲು ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.</p>.<p>ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.</p>.<p>ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-126-799208638</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಳೆಹೊನ್ನೂರು: ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಮತ್ತು ಮಹಾದ್ವಾರ ಲೋಕಾರ್ಪಣೆ ಶನಿವಾರ ಮತ್ತು ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.</p>.<p>ರಾಜಗೋಪುರ ಉದ್ಘಾಟನೆ ಅಂಗವಾಗಿ ಶನಿವಾರ ಗಣಪತಿ ಪೂಜೆ, ಪುಣ್ಯಾಹವಾಚನ, ದೇವನಾಂದಿ, ಮಾತೃಕ ಪೂಜೆ, ರಾಕ್ಷೋಘ್ನ ಶಾಂತಿ, ನವಗ್ರಹ ಶಾಂತಿ, ವಾಸ್ತು ಶಾಂತಿ, ಅಧಿವಾಸ, ಪವಮಾನ, ವಾಯುಸ್ತುತಿ, ದಿಕ್ಪಾಲ ಬಲಿ ಪ್ರಧಾನ, ಕಲಶ ಪ್ರತಿಷ್ಠೆ ಹಾಗೂ ಪಾರಾಯಣ ನಡೆಯಿತು.</p>.<p>ಭಾನುವಾರ ಬೆಳಿಗ್ಗೆ ಪ್ರತಿಷ್ಠಾಂಗ ಹೋಮ, ರಾಮನಾಮ ತಾರಕ ಹೋಮ, ಪವಮಾನ, ವಾಯುಸ್ತುತಿ, ಕಲಶಾಭಿಷೇಕ, ಮಹಾಪೂಜೆ ನಡೆಯಿತು. ಸಂಜೆ ಶೃಂಗೇರಿಯ ಹೆಬ್ಬಾಗಿಲು ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.</p>.<p>ಬಾಳೆಹೊನ್ನೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.</p>.<p>ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಸಚಿವ ಡಿ.ಎನ್.ಜೀವರಾಜ್ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260422-126-799208638</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>