<p><strong>ಬಾಳೆಹೊನ್ನೂರು</strong>: ಮನೆಯಲ್ಲಿ ಅನಾರೋಗ್ಯ ಪೀಡಿತರರಿಗೆ ಔಷಧ ಹಾಗೂ ಸರ್ಕಾರದ ಸವಲತ್ತು ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಹೇರೂರು ಗ್ರಾಮದ ವೀರಗಲ್ಲುಮಕ್ಕಿಯಲ್ಲಿ ಪಾರ್ಶ್ಚವಾಯುವಿನಿಂದ ಬಳಲುತ್ತಿದ್ದ ನಾಗಯ್ಯ ಎಂಬುವವರ ಮನೆಗೆ ಬಂದ ಅಪರಿಚಿತನೊಬ್ಬ ಶೀಘ್ರ ಗುಣಮುಖರಾಗಲು ಆಯುರ್ವೇದ ಔಷಧ ನೀಡುವುದಾಗಿ ಹಾಗೂ ಸರ್ಕಾರದಿಂದ ಆನಾರೋಗ್ಯ ಪೀಡಿತರಿಗೆ ವೀಲ್ ಚೇರ್, ಉಚಿತ ಔಷಧ ಕೊಡಿಸುವುದಾಗಿ ನಂಬಿಸಿ ₹13 ಸಾವಿರ ಹಣ ಪಡೆದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ನಾರಾಯಣ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ರೀತಿ ನಂಬಿಸಿ ₹25 ಸಾವಿರ ಪಡೆದು ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1116194594</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು</strong>: ಮನೆಯಲ್ಲಿ ಅನಾರೋಗ್ಯ ಪೀಡಿತರರಿಗೆ ಔಷಧ ಹಾಗೂ ಸರ್ಕಾರದ ಸವಲತ್ತು ನೀಡುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಘಟನೆಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.</p>.<p>ಹೇರೂರು ಗ್ರಾಮದ ವೀರಗಲ್ಲುಮಕ್ಕಿಯಲ್ಲಿ ಪಾರ್ಶ್ಚವಾಯುವಿನಿಂದ ಬಳಲುತ್ತಿದ್ದ ನಾಗಯ್ಯ ಎಂಬುವವರ ಮನೆಗೆ ಬಂದ ಅಪರಿಚಿತನೊಬ್ಬ ಶೀಘ್ರ ಗುಣಮುಖರಾಗಲು ಆಯುರ್ವೇದ ಔಷಧ ನೀಡುವುದಾಗಿ ಹಾಗೂ ಸರ್ಕಾರದಿಂದ ಆನಾರೋಗ್ಯ ಪೀಡಿತರಿಗೆ ವೀಲ್ ಚೇರ್, ಉಚಿತ ಔಷಧ ಕೊಡಿಸುವುದಾಗಿ ನಂಬಿಸಿ ₹13 ಸಾವಿರ ಹಣ ಪಡೆದು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿ ನಾರಾಯಣ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ.</p>.<p>ಹಿರೇಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಇದೇ ರೀತಿ ನಂಬಿಸಿ ₹25 ಸಾವಿರ ಪಡೆದು ವಂಚಿಸಿದ್ದಾನೆ ಎಂದು ದೂರು ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-126-1116194594</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>