ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿದ ತಕ್ಷಣ ಜಿಲ್ಲಾಡಳಿತವನ್ನು ಸಂಪರ್ಕಿಸಿ ಶವವನ್ನು ಹುಟ್ಟೂರಿಗೆ ತರುವ ಬಗ್ಗೆ ಮಾತುಕತೆ ನಡೆಸಿದ್ದೇನೆ. ಶವ ಪರೀಕ್ಷೆ ನಡೆದಿದ್ದು, ಅಲ್ಲಿಂದ ಬಿಹಾರದ ಬಾಗ್ದೂರ ವಿಮಾನ ನಿಲ್ದಾಣದ ಮೂಲಕ ಬೆಂಗಳೂರಿಗೆ 12 ಗಂಟೆ ಸುಮಾರಿಗೆ ಮೃತದೇಹ ಬರಲಿದೆ. ಅಲ್ಲಿಂದ ಹಾಸನ, ಚಿಕ್ಕಮಗಳೂರು ಮೂಲಕ ರಸ್ತೆ ಮಾರ್ಗವಾಗಿ ಸಂಗಮೇಶ್ವರ ಪೇಟೆಗೆ 6 ಗಂಟೆ ವೇಳೆಗೆ ಬರಬಹುದು. ಸಮುದಾಯ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಮಸೀಗದ್ದೆಯಲ್ಲಿ ಶವ ಸಂಸ್ಕಾರ ನಡೆಯಲಿದೆ’ ಎಂದು ತಿಳಿಸಿದ್ದಾರೆ.