<p><strong>ಬಾಳೆಹೊನ್ನೂರು:</strong> ಪಟ್ಟಣದ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮವು ಗೊಂದಲದ ಗೂಡಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತು.</p>.<p>ಮದ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಮಹಮ್ಮದ್ ಹನೀಫ್ ಎಲ್ಲರಿಗೂ ಸಂದೇಶ ಕಳುಹಿಸಿದ್ದರು. ಬಿ.ಕಣಬೂರು, ಮಾಗುಂಡಿ, ಬನ್ನೂರು, ಆಡುವಳ್ಳಿ ಹಾಗೂ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಕಾರ್ಮಿಕರು ಸಾಲುಗಟ್ಟಿ ನಿಂತಿದ್ದರು.</p>.<p>ಅಲ್ಲಿಗೆ ಬಂದ ಬನ್ನೂರು, ಆಡುವಳ್ಳಿ ಹಾಗೂ ಬಿ.ಕಣಬೂರು ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಸದಸ್ಯರು, ‘ಕಿಟ್ ವಿತರಣೆ ಸರ್ಕಾರದ ಕಾರ್ಯಕ್ರಮವಾಗಿದ್ದರೂ ಈ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿ ಏಕೆ ನೀಡಿಲ್ಲ? ಈ ಬಗ್ಗೆ ಹಲವು ಕಾರ್ಮಿಕರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಇದನ್ನು ಶಾಸಕರು ವೈಯಕ್ತಿಕವಾಗಿ ನೀಡುತ್ತಿರುವುದಾಗಿ ಬಿಂಬಿಸುತ್ತಿದ್ದೀರಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ ಹಾಗೂ ಮಹಮ್ಮದ್ ಹನೀಫ್ ಕಾಂಗ್ರೆಸ್ ಕಾರ್ಯಕರ್ತರಿಗೆ ಟೋಕನ್ ನೀಡುತ್ತಿದ್ದಾರೆ. ಅವರನ್ನು ಹೊರ ಕಳುಹಿಸಿ’ ಎಂದು ಅಧಿಕಾರಿಗಳಿಗೆ ಬಿಜೆಪಿ ಮುಖಂಡರು ಒತ್ತಾಯ ಮಾಡಿದರು.</p>.<p>ಈ ವೇಳೆ ಬಿಜೆಪಿ ಹೋಬಳಿ ಅಧ್ಯಕ್ಷ ಪ್ರಭಾಕರ್ ಪ್ರಣಸ್ವಿ, ಕಾರ್ಯದರ್ಶಿ ಕಿಚ್ಚಬ್ಬಿ ಪ್ರದೀಪ್, ಬಿ ಕಣಬೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ಜಗದೀಶ್ಚಂದ್ರ, ಯು.ಅಶ್ರಫ್ ಸೇರಿದಂತೆ ಹಲವರು ಸ್ಥಳಕ್ಕೆ ಬಂದರು.</p>.<p>ಈ ಮಧ್ಯೆ ಶಾಸಕರು ಮಧ್ಯಾಹ್ನ 3.30 ಆದರೂ ಬರಲಿಲ್ಲ. ಬೇರೆ ಕಡೆಗಳಿಂದ ಕಾರ್ಮಿಕರು ಬಂದಿದ್ದು ಅವರಿಗೆ ತಕ್ಷಣ ಕಿಟ್ ವಿತರಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದರು. ಈ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ನ ಎಂ.ಎಸ್.ಅರುಣೇಶ್, ಇಬ್ರಾಹಿಂ ಶಾಫಿ ಮತ್ತಿತರರು ಶಾಸಕರನ್ನು ಸಮರ್ಥಿಸಲು ಮುಂದಾದರು.</p>.<p>ಇದರಿಂದ ಆಕ್ರೋಶಗೊಂಡ ಬಿಜೆಪಿ ಮುಖಂಡರು, ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಸ್ಥಳದಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು. ಈ ವೇಳೆ ಎರಡೂ ಪಕ್ಷದ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತು.</p>.<p>ಸ್ಥಳಕ್ಕೆ ಬಂದ ಠಾಣಾಧಿಕಾರಿ ನಿತ್ಯಾನಂದ ಗೌಡ ಮತ್ತು ಸಿಬ್ಂದಿ ಎರಡೂ ಕಡೆಯವರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪಟ್ಟು ಬಿಡದ ಬಿಜೆಪಿ ಮುಖಂಡರು ಶಾಸಕರು ಸ್ಥಳಕ್ಕೆ ಬರುವ ಮುನ್ನ ಹಲವರಿಗೆ ಅಧಿಕಾರಿಗಳ ಮೂಲಕ ಆಹಾರದ ಕಿಟ್ ವಿತರಿಸಿದರು.</p>.<p>ಆಡುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯು.ಸಿ.ಪ್ರದೀಪ್, ಉಪಾಧ್ಯಕ್ಷೆ ಪ್ರತಿಮಾ ಶಶಿಧರ್, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುರಾ ರಾಜಪ್ಪ ಗೌಡ, ಉಪಾಧ್ಯಕ್ಷ ಗೋಪಾಲ್, ಮಾಗುಂಡಿ ಅಧ್ಯಕ್ಷೆ ಪ್ರಮೀಳಾ ಸೆಲ್ವಿಯಾ ಸೇರಾವೊ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಳೆಹೊನ್ನೂರು:</strong> ಪಟ್ಟಣದ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮವು ಗೊಂದಲದ ಗೂಡಾಗಿತ್ತು. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತು.</p>.<p>ಮದ್ಯಾಹ್ನ 2 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ ಎಂದು ಕಾಂಗ್ರೆಸ್ ಹೋಬಳಿ ಅಧ್ಯಕ್ಷ ಮಹಮ್ಮದ್ ಹನೀಫ್ ಎಲ್ಲರಿಗೂ ಸಂದೇಶ ಕಳುಹಿಸಿದ್ದರು. ಬಿ.ಕಣಬೂರು, ಮಾಗುಂಡಿ, ಬನ್ನೂರು, ಆಡುವಳ್ಳಿ ಹಾಗೂ ಕರ್ಕೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಕಾರ್ಮಿಕರು ಸಾಲುಗಟ್ಟಿ ನಿಂತಿದ್ದರು.</p>.<p>ಅಲ್ಲಿಗೆ ಬಂದ ಬನ್ನೂರು, ಆಡುವಳ್ಳಿ ಹಾಗೂ ಬಿ.ಕಣಬೂರು ಗ್ರಾಮ ಪಂಚಾಯಿತಿಯ ಬಿಜೆಪಿ ಬೆಂಬಲಿತ ಸದಸ್ಯರು, ‘ಕಿಟ್ ವಿತರಣೆ ಸರ್ಕಾರದ ಕಾರ್ಯಕ್ರಮವಾಗಿದ್ದರೂ ಈ ಬಗ್ಗೆ ಜನಪ್ರತಿನಿಧಿಗಳಿಗೆ ಮಾಹಿತಿ ಏಕೆ ನೀಡಿಲ್ಲ? ಈ ಬಗ್ಗೆ ಹಲವು ಕಾರ್ಮಿಕರು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ. ಇದನ್ನು ಶಾಸಕರು ವೈಯಕ್ತಿಕವಾಗಿ ನೀಡುತ್ತಿರುವುದಾಗಿ ಬಿಂಬಿಸುತ್ತಿದ್ದೀರಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಂ.ಜೆ.ಮಹೇಶ್ ಆಚಾರ್ಯ ಹಾಗೂ ಮಹಮ್ಮದ್ ಹನೀಫ್ ಕಾಂಗ್ರೆಸ್ ಕಾರ್ಯಕರ್ತರಿಗೆ ಟೋಕನ್ ನೀಡುತ್ತಿದ್ದಾರೆ. ಅವರನ್ನು ಹೊರ ಕಳುಹಿಸಿ’ ಎಂದು ಅಧಿಕಾರಿಗಳಿಗೆ ಬಿಜೆಪಿ ಮುಖಂಡರು ಒತ್ತಾಯ ಮಾಡಿದರು.</p>.<p>ಈ ವೇಳೆ ಬಿಜೆಪಿ ಹೋಬಳಿ ಅಧ್ಯಕ್ಷ ಪ್ರಭಾಕರ್ ಪ್ರಣಸ್ವಿ, ಕಾರ್ಯದರ್ಶಿ ಕಿಚ್ಚಬ್ಬಿ ಪ್ರದೀಪ್, ಬಿ ಕಣಬೂರು ಗ್ರಾಮ ಪಂಚಾಯಿತಿ ಸದಸ್ಯ ಬಿ.ಜಗದೀಶ್ಚಂದ್ರ, ಯು.ಅಶ್ರಫ್ ಸೇರಿದಂತೆ ಹಲವರು ಸ್ಥಳಕ್ಕೆ ಬಂದರು.</p>.<p>ಈ ಮಧ್ಯೆ ಶಾಸಕರು ಮಧ್ಯಾಹ್ನ 3.30 ಆದರೂ ಬರಲಿಲ್ಲ. ಬೇರೆ ಕಡೆಗಳಿಂದ ಕಾರ್ಮಿಕರು ಬಂದಿದ್ದು ಅವರಿಗೆ ತಕ್ಷಣ ಕಿಟ್ ವಿತರಿಸುವಂತೆ ಬಿಜೆಪಿ ಮುಖಂಡರು ಆಗ್ರಹಿಸಿದರು. ಈ ವೇಳೆ ಸ್ಥಳದಲ್ಲಿದ್ದ ಕಾಂಗ್ರೆಸ್ನ ಎಂ.ಎಸ್.ಅರುಣೇಶ್, ಇಬ್ರಾಹಿಂ ಶಾಫಿ ಮತ್ತಿತರರು ಶಾಸಕರನ್ನು ಸಮರ್ಥಿಸಲು ಮುಂದಾದರು.</p>.<p>ಇದರಿಂದ ಆಕ್ರೋಶಗೊಂಡ ಬಿಜೆಪಿ ಮುಖಂಡರು, ಶಾಸಕರು ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಸ್ಥಳದಲ್ಲೇ ಕುಳಿತು ಪ್ರತಿಭಟನೆಗೆ ಮುಂದಾದರು. ಈ ವೇಳೆ ಎರಡೂ ಪಕ್ಷದ ಮುಖಂಡರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸುವ ಹಂತ ತಲುಪಿತು.</p>.<p>ಸ್ಥಳಕ್ಕೆ ಬಂದ ಠಾಣಾಧಿಕಾರಿ ನಿತ್ಯಾನಂದ ಗೌಡ ಮತ್ತು ಸಿಬ್ಂದಿ ಎರಡೂ ಕಡೆಯವರನ್ನು ಸಮಾಧಾನಗೊಳಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಪಟ್ಟು ಬಿಡದ ಬಿಜೆಪಿ ಮುಖಂಡರು ಶಾಸಕರು ಸ್ಥಳಕ್ಕೆ ಬರುವ ಮುನ್ನ ಹಲವರಿಗೆ ಅಧಿಕಾರಿಗಳ ಮೂಲಕ ಆಹಾರದ ಕಿಟ್ ವಿತರಿಸಿದರು.</p>.<p>ಆಡುವಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಯು.ಸಿ.ಪ್ರದೀಪ್, ಉಪಾಧ್ಯಕ್ಷೆ ಪ್ರತಿಮಾ ಶಶಿಧರ್, ಬನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಧುರಾ ರಾಜಪ್ಪ ಗೌಡ, ಉಪಾಧ್ಯಕ್ಷ ಗೋಪಾಲ್, ಮಾಗುಂಡಿ ಅಧ್ಯಕ್ಷೆ ಪ್ರಮೀಳಾ ಸೆಲ್ವಿಯಾ ಸೇರಾವೊ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>