‘20 ವರ್ಷಗಳ ಹಿಂದೆ ಜಿಲ್ಲೆಯ ಕೊಪ್ಪ ಭಾಗದಲ್ಲಿ ಉಗ್ರರಿಗೆ ತರಬೇತಿ ನಂಟು ಇತ್ತು. ಭಟ್ಕಳ, ಮಂಗಳೂರಿನಲ್ಲಿ ಉಗ್ರಗಾಮಿ ಚಟುವಟಿಕೆ ನಡೆಸಿದವರು ಜಿಲ್ಲೆಯಲ್ಲಿ ನೆಲೆ ಕಂಡುಕೊಂಡಿದ್ದರು. ಜಿಲ್ಲೆಯನ್ನು ಉಗ್ರರು ತರಬೇತಿ ತಾಣವಾಗಿಸಿಕೊಳ್ಳುವ ಸಾಧ್ಯತೆ ಇದ್ದು, ಪೊಲೀಸ್ ಗುಪ್ತಚರ ವಿಭಾಗವನ್ನು ಬಲಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತಿಳಿಸಿದ್ದೇನೆ’ ಎಂದರು.