<p><strong>ಮೂಡಿಗೆರೆ</strong>: ತಾಲ್ಲೂಕಿನ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಎಸ್. ನಾರಾಯಣಗೌಡ, ಉಪಾಧ್ಯಕ್ಷರಾಗಿ ಬಿ.ಆರ್. ರಂಗನಾಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬಿ.ಎಸ್. ನಾರಾಯಣಗೌಡ, ಬಿ.ಆರ್. ರಂಗನಾಥ್ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಜ್ಯೋತಿಲಕ್ಷ್ಮಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.</p>.<p>ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ನಾರಾಯಣಗೌಡ, ‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಸೇವೆ ಮಾಡಲು ಶ್ರಮಿಸುತ್ತೇನೆ. ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಜೊತೆಯಲ್ಲಿ ಸಾಧ್ಯವಾಗುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು ಬದ್ಧನಾಗಿದ್ದೇನೆʼ ಎಂದರು.</p>.<p>ಉಪಾಧ್ಯಕ್ಷ ಬಿ.ಆರ್. ರಂಗನಾಥ್ ಮಾತನಾಡಿ, ‘ಪ್ರಾಮಾಣಿಕವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇನೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಜಯಗಳಿಸಿ ಆಡಳಿತ ಮಂಡಳಿ ಉಪಾಧ್ಯಕ್ಷನಾಗಿ ಅಧಿಕಾರ ಪಡೆಯಲು ಸಹಕರಿಸಿ ಎಲ್ಲಾ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದ ನ ಸಲ್ಲಿಸುತ್ತೇನೆʼ ಎಂದರು.</p>.<p>ನಿರ್ದೇಶಕರಾದ ಬಿ.ಎಂ. ಭರತ್, ಬಿ.ಎಸ್. ವಿಕ್ರಂ, ಗಜೇಂದ್ರ ಟಿ.ಎಂ, ಅಭಿಲಾಷ್ ಎ.ಆರ್, ಕಲ್ಲೇಶ್ ಬಿ.ಎಸ್, ಕೆ.ಕೆ. ಯತೀಶ್, ಮಮತಾ ಎಚ್.ಕೆ, ರವೀಂದ್ರ ಬಿ.ಎಂ, ಲಕ್ಷ್ಮಿ ಜಿ.ಬಿ, ಶರತ್ ಬಿ.ಬಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ತಾಲ್ಲೂಕಿನ ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಬಿ.ಎಸ್. ನಾರಾಯಣಗೌಡ, ಉಪಾಧ್ಯಕ್ಷರಾಗಿ ಬಿ.ಆರ್. ರಂಗನಾಥ್ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬಿ.ಎಸ್. ನಾರಾಯಣಗೌಡ, ಬಿ.ಆರ್. ರಂಗನಾಥ್ ಹೊರತು ಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಅಧಿಕಾರಿ ಜ್ಯೋತಿಲಕ್ಷ್ಮಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.</p>.<p>ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ನಾರಾಯಣಗೌಡ, ‘ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಸೇವೆ ಮಾಡಲು ಶ್ರಮಿಸುತ್ತೇನೆ. ಸಹಕಾರ ಸಂಘದಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಜೊತೆಯಲ್ಲಿ ಸಾಧ್ಯವಾಗುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು ಬದ್ಧನಾಗಿದ್ದೇನೆʼ ಎಂದರು.</p>.<p>ಉಪಾಧ್ಯಕ್ಷ ಬಿ.ಆರ್. ರಂಗನಾಥ್ ಮಾತನಾಡಿ, ‘ಪ್ರಾಮಾಣಿಕವಾಗಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತೇನೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಜಯಗಳಿಸಿ ಆಡಳಿತ ಮಂಡಳಿ ಉಪಾಧ್ಯಕ್ಷನಾಗಿ ಅಧಿಕಾರ ಪಡೆಯಲು ಸಹಕರಿಸಿ ಎಲ್ಲಾ ಸದಸ್ಯರುಗಳಿಗೆ ತುಂಬು ಹೃದಯದ ಧನ್ಯವಾದ ನ ಸಲ್ಲಿಸುತ್ತೇನೆʼ ಎಂದರು.</p>.<p>ನಿರ್ದೇಶಕರಾದ ಬಿ.ಎಂ. ಭರತ್, ಬಿ.ಎಸ್. ವಿಕ್ರಂ, ಗಜೇಂದ್ರ ಟಿ.ಎಂ, ಅಭಿಲಾಷ್ ಎ.ಆರ್, ಕಲ್ಲೇಶ್ ಬಿ.ಎಸ್, ಕೆ.ಕೆ. ಯತೀಶ್, ಮಮತಾ ಎಚ್.ಕೆ, ರವೀಂದ್ರ ಬಿ.ಎಂ, ಲಕ್ಷ್ಮಿ ಜಿ.ಬಿ, ಶರತ್ ಬಿ.ಬಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶಾಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>