<p><strong>ಚಿಕ್ಕಮಗಳೂರು:</strong> ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಮಾಡುವ ಧೋರಣೆ ವಿರೋಧಿಸಿ ಮತ್ತು ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.</p>.<p>ಗುರುನಾಥ ಟಾಕೀಸ್ ಸಮೀಪದ ಕೆನರಾ ಬ್ಯಾಂಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ನೌಕರರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಬಸವರಾಜ್ ಮಾತನಾಡಿ, ‘ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಧೋರಣೆ, ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತರುವುದನ್ನು ಖಂಡಿಸಿ ರಾಷ್ಟ್ರವ್ಯಾಪಿ ನೌಕರರು ಸಾರ್ವತಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಸಾರ್ವಜನಿಕ ಬ್ಯಾಂಕ್ಗಳನ್ನು ಬಲಪಡಿಸಬೇಕು. ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಖಾಸಗೀಕರಣ ನಿಲ್ಲಿಸಬೇಕು. ಬಂಡವಾಳ ಹಿಂತೆಗೆತ, ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಿಮಾ ಕಂಪನಿಗಳ ವಿಲೀನ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ನೌಕರರ ಗುತ್ತಿಗೆ ಆಧಾರ ಹಾಗೂ ಹೊರ ಗುತ್ತಿಗೆ ನಿಲ್ಲಿಸಬೇಕು. ಎನ್ಪಿಸಿ ವ್ಯವಸ್ಥೆಯನ್ನು ವಜಾಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಗ್ರಾಹಕರ ಸುಲಿಗೆಗೆ ಕಾರಣವಾಗಿರುವ ಸರ್ವೀಸ್ ಚಾರ್ಚ್ ವ್ಯವಸ್ಥೆ ನಿಲ್ಲಿಸಬೇಕು. ಎಲ್ಐಸಿ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್ಟಿ ಶುಲ್ಕವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ನೌಕರರಿಗೆ ಬ್ಯಾಂಕ್ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷ ಕೆ.ನಾಗರಾಜ್, ಸಂಘಟನಾ ಕಾರ್ಯದರ್ಶಿ ಉಜ್ವಲ್ ಪಡುಬಿದ್ರಿ, ನೌಕರರಾದ ದಾನೇಂದ್ರ, ಪ್ರದೀಪ್ಕುಮಾರ್, ನಿವೃತ್ತ ನೌಕರ ಎಚ್.ಟಿ.ಹಾಲಪ್ಪ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಮಾಡುವ ಧೋರಣೆ ವಿರೋಧಿಸಿ ಮತ್ತು ಕಾರ್ಮಿಕರಿಗೆ ಕನಿಷ್ಠ ವೇತನ ಕಾಯ್ದೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.</p>.<p>ಗುರುನಾಥ ಟಾಕೀಸ್ ಸಮೀಪದ ಕೆನರಾ ಬ್ಯಾಂಕ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ನೌಕರರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.</p>.<p>ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಬಸವರಾಜ್ ಮಾತನಾಡಿ, ‘ಕೇಂದ್ರ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಧೋರಣೆ, ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತರುವುದನ್ನು ಖಂಡಿಸಿ ರಾಷ್ಟ್ರವ್ಯಾಪಿ ನೌಕರರು ಸಾರ್ವತಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಸಾರ್ವಜನಿಕ ಬ್ಯಾಂಕ್ಗಳನ್ನು ಬಲಪಡಿಸಬೇಕು. ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಖಾಸಗೀಕರಣ ನಿಲ್ಲಿಸಬೇಕು. ಬಂಡವಾಳ ಹಿಂತೆಗೆತ, ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಿಮಾ ಕಂಪನಿಗಳ ವಿಲೀನ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.</p>.<p>ನೌಕರರ ಗುತ್ತಿಗೆ ಆಧಾರ ಹಾಗೂ ಹೊರ ಗುತ್ತಿಗೆ ನಿಲ್ಲಿಸಬೇಕು. ಎನ್ಪಿಸಿ ವ್ಯವಸ್ಥೆಯನ್ನು ವಜಾಗೊಳಿಸಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಗ್ರಾಹಕರ ಸುಲಿಗೆಗೆ ಕಾರಣವಾಗಿರುವ ಸರ್ವೀಸ್ ಚಾರ್ಚ್ ವ್ಯವಸ್ಥೆ ನಿಲ್ಲಿಸಬೇಕು. ಎಲ್ಐಸಿ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್ಟಿ ಶುಲ್ಕವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.</p>.<p>ನೌಕರರಿಗೆ ಬ್ಯಾಂಕ್ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಸಂಘದ ಅಧ್ಯಕ್ಷ ಕೆ.ನಾಗರಾಜ್, ಸಂಘಟನಾ ಕಾರ್ಯದರ್ಶಿ ಉಜ್ವಲ್ ಪಡುಬಿದ್ರಿ, ನೌಕರರಾದ ದಾನೇಂದ್ರ, ಪ್ರದೀಪ್ಕುಮಾರ್, ನಿವೃತ್ತ ನೌಕರ ಎಚ್.ಟಿ.ಹಾಲಪ್ಪ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>