ಕೇಂದ್ರಸರ್ಕಾರವು ಕೆನರಾ ಬ್ಯಾಂಕ್, ಕಾರ್ಪೋರೇಶನ್ ಬ್ಯಾಂಕ್, ಸಿಂಡಿಕೇಟ್, ಬ್ಯಾಂಕ್ ಆಫ್ ಇಂಡಿಯಾ, ಯೂನಿಯನ್ ಬ್ಯಾಂಕ್, ಅಲಹಾಬಾದ್ ಬ್ಯಾಂಕ್ ಸಹಿತ ಹತ್ತು ಬ್ಯಾಂಕುಗಳನ್ನು ವಿಲೀನಗೊಳಿಸುವ ನಿರ್ಧಾರವನ್ನು ಕೈ ಬಿಡಬೇಕು. ಸುಸ್ತಿ ಸಾಲ(ಎನ್ಪಿಎ)ಗಳ ಮರುಪವಾತಿಗೆ ಸಹಕರಿಸಬೇಕು. ಗ್ರಾಹಕರಿಗೆ ವಿಧಿಸುತ್ತಿರುವ ದಂಡ ಮತ್ತು ಸೇವಾಶುಲ್ಕ ಕಡಿಮೆ ಮಾಡಬೇಕು. ಠೇವಣಿಗಳ ಮೇಲಿನ ಬಡ್ಡಿ ದರವನ್ನು ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.