<p>ಚಿಕ್ಕಮಗಳೂರು/ ಕಡೂರು: ರಾಜ್ಯ ‘ಅಪೆಕ್ಸ್’ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಬೆಳ್ಳಿ ಪ್ರಕಾಶ್ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬೆಳ್ಳಿ ಪ್ರಕಾಶ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿಗೆ ಈಚೆಗೆ ಚುನಾವಣೆ ನಡೆದಿತ್ತು. ಬ್ಯಾಂಕ್ ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಲಿತರ ತೆಕ್ಕೆಯಿಂದ ಬಿಜೆಪಿ ಬೆಂಬಲಿತರ ಮಡಿಲಿಗೆ ಬಿದ್ದಿತ್ತು.</p>.<p>ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬೆಳ್ಳಿಪ್ರಕಾಶ್ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು, ಕಾರಣಾಂತರಗಳಿಂದ ಅದು ಕೈತಪ್ಪಿತ್ತು. ಅವರದೇ ಸಮುದಾಯದ (ಲಿಂಗಾಯತ) ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್.ಸುರೇಶ್ ಅವರಿಗೆ ಒಲಿದಿತ್ತು.</p>.<p>ಬೆಳ್ಳಿ ಪ್ರಕಾಶ್ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಗ ಆಯ್ಕೆ ಮಾಡಲಾಗಿತ್ತು. ಈಗ ಅಧ್ಯಕ್ಷ ಗಾದಿಗೆ ಏರಿದ್ದಾರೆ.</p>.<p>ನಡೆದು ಬಂದ ಹಾದಿ: ಬೆಳ್ಳಿ ಪ್ರಕಾಶ್ ಅವರು ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಕುಂದೂರು ಗ್ರಾಮದ ಶ್ರೀಕಂಠಪ್ಪ ಮತ್ತು ಗೌರಮ್ಮ ದಂಪತಿ ಪುತ್ರ. ಬಿ.ಇ, ಎಲ್ಎಲ್ಬಿ ವ್ಯಾಸಂಗ ಮಾಡಿದ್ದಾರೆ.</p>.<p>ವಕೀಲರಾಗಿ ಕೆಲದಿನ ಕಾರ್ಯನಿರ್ವಹಿಸಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದರು.ಕಾಂಗ್ರೆಸ್ನಿಂದ ಯಾನ ಆರಂಭಿಸಿ ಜೆಡಿಎಸ್, ಬಿಜೆಪಿ, ಕೆಜೆಪಿ ಸೇರಿ ಹಾಲಿ ಬಿಜೆಪಿಯಲ್ಲಿ ಪಯಣ ಮುಂದುವರಿಸಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ, ಅಧ್ಯಕ್ಷ, ಕುಂದೂರು ಹಾಲು ಘಟಕದ ಅಧ್ಯಕ್ಷ, ಸಿಂಗಟಗೆರೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.</p>.<p><strong>ಅವಿರೋಧ ಆಯ್ಕೆಗೆ ಸಂತಸ</strong></p>.<p>ಬೆಳ್ಳಿ ಪ್ರಕಾಶ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಸರ್ವರ ಸಹಕಾರದೊಂದಿಗೆ ಬ್ಯಾಂಕ್ ಅನ್ನು ಪ್ರಗತಿ ಪಥದಲ್ಲಿ ಒಯ್ಯಲು ಶ್ರಮಿಸುತ್ತೇನೆ. ಸಹಕಾರಿ ಕ್ಷೇತ್ರದ ಸಮಗ್ರ ಚಿಂತನೆ ಅಳವಡಿಸಿಕೊಂಡು ಮುನ್ನಡೆಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು/ ಕಡೂರು: ರಾಜ್ಯ ‘ಅಪೆಕ್ಸ್’ ಬ್ಯಾಂಕ್ ಅಧ್ಯಕ್ಷರಾಗಿ ಶಾಸಕ ಬೆಳ್ಳಿ ಪ್ರಕಾಶ್ ಅವರು ಮಂಗಳವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬೆಳ್ಳಿ ಪ್ರಕಾಶ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಆಡಳಿತ ಮಂಡಳಿಗೆ ಈಚೆಗೆ ಚುನಾವಣೆ ನಡೆದಿತ್ತು. ಬ್ಯಾಂಕ್ ಆಡಳಿತ ಚುಕ್ಕಾಣಿ ಜೆಡಿಎಸ್ ಬೆಂಲಿತರ ತೆಕ್ಕೆಯಿಂದ ಬಿಜೆಪಿ ಬೆಂಬಲಿತರ ಮಡಿಲಿಗೆ ಬಿದ್ದಿತ್ತು.</p>.<p>ನಿರ್ದೇಶಕರಾಗಿ ಆಯ್ಕೆಯಾಗಿದ್ದ ಬೆಳ್ಳಿಪ್ರಕಾಶ್ ಅವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದರು, ಕಾರಣಾಂತರಗಳಿಂದ ಅದು ಕೈತಪ್ಪಿತ್ತು. ಅವರದೇ ಸಮುದಾಯದ (ಲಿಂಗಾಯತ) ತರೀಕೆರೆ ಕ್ಷೇತ್ರದ ಶಾಸಕ ಡಿ.ಎಸ್.ಸುರೇಶ್ ಅವರಿಗೆ ಒಲಿದಿತ್ತು.</p>.<p>ಬೆಳ್ಳಿ ಪ್ರಕಾಶ್ ಅವರನ್ನು ರಾಜ್ಯ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಆಗ ಆಯ್ಕೆ ಮಾಡಲಾಗಿತ್ತು. ಈಗ ಅಧ್ಯಕ್ಷ ಗಾದಿಗೆ ಏರಿದ್ದಾರೆ.</p>.<p>ನಡೆದು ಬಂದ ಹಾದಿ: ಬೆಳ್ಳಿ ಪ್ರಕಾಶ್ ಅವರು ಕಡೂರು ತಾಲ್ಲೂಕಿನ ಸಿಂಗಟಗೆರೆ ಹೋಬಳಿಯ ಕುಂದೂರು ಗ್ರಾಮದ ಶ್ರೀಕಂಠಪ್ಪ ಮತ್ತು ಗೌರಮ್ಮ ದಂಪತಿ ಪುತ್ರ. ಬಿ.ಇ, ಎಲ್ಎಲ್ಬಿ ವ್ಯಾಸಂಗ ಮಾಡಿದ್ದಾರೆ.</p>.<p>ವಕೀಲರಾಗಿ ಕೆಲದಿನ ಕಾರ್ಯನಿರ್ವಹಿಸಿ ರಾಜಕೀಯಕ್ಕೆ ಪದಾರ್ಪಣೆ ಮಾಡಿದರು.ಕಾಂಗ್ರೆಸ್ನಿಂದ ಯಾನ ಆರಂಭಿಸಿ ಜೆಡಿಎಸ್, ಬಿಜೆಪಿ, ಕೆಜೆಪಿ ಸೇರಿ ಹಾಲಿ ಬಿಜೆಪಿಯಲ್ಲಿ ಪಯಣ ಮುಂದುವರಿಸಿದ್ದಾರೆ.</p>.<p>ಜಿಲ್ಲಾ ಪಂಚಾಯಿತಿ ಸದಸ್ಯ, ಅಧ್ಯಕ್ಷ, ಕುಂದೂರು ಹಾಲು ಘಟಕದ ಅಧ್ಯಕ್ಷ, ಸಿಂಗಟಗೆರೆ ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.</p>.<p><strong>ಅವಿರೋಧ ಆಯ್ಕೆಗೆ ಸಂತಸ</strong></p>.<p>ಬೆಳ್ಳಿ ಪ್ರಕಾಶ್ ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ, ‘ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ. ಸರ್ವರ ಸಹಕಾರದೊಂದಿಗೆ ಬ್ಯಾಂಕ್ ಅನ್ನು ಪ್ರಗತಿ ಪಥದಲ್ಲಿ ಒಯ್ಯಲು ಶ್ರಮಿಸುತ್ತೇನೆ. ಸಹಕಾರಿ ಕ್ಷೇತ್ರದ ಸಮಗ್ರ ಚಿಂತನೆ ಅಳವಡಿಸಿಕೊಂಡು ಮುನ್ನಡೆಸುತ್ತೇನೆ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>