<p><strong>ಕಳಸ</strong>: ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ರಹಿತರು ನಿವೇಶನ ನೀಡುವಂತೆ ಒತ್ತಾಯಿಸಿ ಮಂಗಳವಾರ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. </p>.<p>ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಇದಕ್ಕೂ ಮುನ್ನ ವಸತಿರಹಿತರು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ಕೆಂಬಾವುಟ ಹಿಡಿದು ಘೋಷಣೆ ಕೂಗುತ್ತಾ ಪಂಚಾಯಿತಿ ಕಚೇರಿವರೆಗೆ ಸಾಗಿದರು.</p>.<p>ಪಂಚಾಯಿತಿ ಆವರಣದಲ್ಲಿ ಮಾತನಾಡಿದ ಸಿಪಿಐ ಮುಖಂಡ ಲಕ್ಷ್ಮಣಾಚಾರ್, ‘ಹೊರನಾಡು ಪಂಚಾಯಿತಿಯ ವಸತಿ ರಹಿತರ ಪಟ್ಟಿಯಲ್ಲಿ ಬಹಳಷ್ಟು ನಿವೇಶನ ರಹಿತರ ಹೆಸರು ಬಿಟ್ಟು ಹೋಗಿದೆ. ಅವರ ಹೆಸರನ್ನು ಸೇರ್ಪಡೆ ಮಾಡಬೇಕು. ತುರ್ತಾಗಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ಗೋಪಾಲ ಶೆಟ್ಟಿ ಮಾತನಾಡಿ, ‘ನಮ್ಮ ಪಕ್ಷ ಕಳೆದ 15 ವರ್ಷದಿಂದ ಸೂರಿಗಾಗಿ ಸಮರ ನಡೆಸುತ್ತಿದ್ದರೂ, ಆಳುವ ಸರ್ಕಾರಗಳು ಈವರೆಗೂ ನಿವೇಶನ ಹಂಚುವ ಕೆಲಸ ಮಾಡಿಲ್ಲ. ಆದ್ದರಿಂದ ಹೋರಾಟದ ಮೂಲಕ ಮತ್ತೆ ಅಧಿಕಾರಿಗಳು ಮತ್ತು ಸರ್ಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ’ ಎಂದರು.</p>.<p>ಸಿಪಿಐ ಮುಖಂಡ ರಮೇಶ್ ಕೆಳಗೂರು, ಪಿಡಿಒ ಅರುಣ ಕುಮಾರ್, ಪಂಚಾಯಿತಿ ಅಧ್ಯಕ್ಷ ಮಧುಪ್ರಸಾದ್ ಇದ್ದರು. ನಿವೇಶನ ಮಂಜೂರು ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಳಸ</strong>: ಹೊರನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಸತಿ ರಹಿತರು ನಿವೇಶನ ನೀಡುವಂತೆ ಒತ್ತಾಯಿಸಿ ಮಂಗಳವಾರ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. </p>.<p>ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಇದಕ್ಕೂ ಮುನ್ನ ವಸತಿರಹಿತರು ಗ್ರಾಮದಲ್ಲಿ ಮೆರವಣಿಗೆ ನಡೆಸಿದರು. ಕೆಂಬಾವುಟ ಹಿಡಿದು ಘೋಷಣೆ ಕೂಗುತ್ತಾ ಪಂಚಾಯಿತಿ ಕಚೇರಿವರೆಗೆ ಸಾಗಿದರು.</p>.<p>ಪಂಚಾಯಿತಿ ಆವರಣದಲ್ಲಿ ಮಾತನಾಡಿದ ಸಿಪಿಐ ಮುಖಂಡ ಲಕ್ಷ್ಮಣಾಚಾರ್, ‘ಹೊರನಾಡು ಪಂಚಾಯಿತಿಯ ವಸತಿ ರಹಿತರ ಪಟ್ಟಿಯಲ್ಲಿ ಬಹಳಷ್ಟು ನಿವೇಶನ ರಹಿತರ ಹೆಸರು ಬಿಟ್ಟು ಹೋಗಿದೆ. ಅವರ ಹೆಸರನ್ನು ಸೇರ್ಪಡೆ ಮಾಡಬೇಕು. ತುರ್ತಾಗಿ ಅರ್ಹರಿಗೆ ನಿವೇಶನ ಹಂಚಿಕೆ ಮಾಡಿ ಹಕ್ಕುಪತ್ರ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡ ಗೋಪಾಲ ಶೆಟ್ಟಿ ಮಾತನಾಡಿ, ‘ನಮ್ಮ ಪಕ್ಷ ಕಳೆದ 15 ವರ್ಷದಿಂದ ಸೂರಿಗಾಗಿ ಸಮರ ನಡೆಸುತ್ತಿದ್ದರೂ, ಆಳುವ ಸರ್ಕಾರಗಳು ಈವರೆಗೂ ನಿವೇಶನ ಹಂಚುವ ಕೆಲಸ ಮಾಡಿಲ್ಲ. ಆದ್ದರಿಂದ ಹೋರಾಟದ ಮೂಲಕ ಮತ್ತೆ ಅಧಿಕಾರಿಗಳು ಮತ್ತು ಸರ್ಕಾರವನ್ನು ಎಚ್ಚರಿಸುವ ಕೆಲಸ ನಡೆಯುತ್ತಿದೆ’ ಎಂದರು.</p>.<p>ಸಿಪಿಐ ಮುಖಂಡ ರಮೇಶ್ ಕೆಳಗೂರು, ಪಿಡಿಒ ಅರುಣ ಕುಮಾರ್, ಪಂಚಾಯಿತಿ ಅಧ್ಯಕ್ಷ ಮಧುಪ್ರಸಾದ್ ಇದ್ದರು. ನಿವೇಶನ ಮಂಜೂರು ಮಾಡುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>